ಅದಮಾರು ಶ್ರೀಗಳಿಂದ ವಿಶ್ವ ಪರಿಸರ ದಿನಾಚರಣೆ

Update: 2020-06-05 16:51 GMT

ಉಡುಪಿ, ಜೂ.5: ವಿಶ್ವ ಪರಿಸರ ದಿನಾಚರಣೆಯ ಅಂಗವಾಗಿ ಇಂದು ಪರ್ಯಾಯ ಅದಮಾರು ಮಠದ ಆವರಣದಲ್ಲಿ ಶ್ರೀಈಶಪ್ರಿಯ ತೀರ್ಥ ಶ್ರೀಪಾದರು ಗಿಡ ನೆಡುವುದರ ಮೂಲಕ ಎಲ್ಲರಿಗೂ ಸ್ಪೂರ್ತಿಯಾದರು.

ಮಠದ ಅವರಣದಲ್ಲಿ ಗಿಡ ನೆಟ್ಟು ಮಾತನಾಡಿದ ಪರ್ಯಾಯಶ್ರೀಗಳು ಗಿಡ ಮರಗಳು ಹಾಗೂ ಪ್ರಕೃತಿಯ ಸಂರಕ್ಷಣೆ ಪ್ರಸ್ತುತ ಅತ್ಯಗತ್ಯವಾಗಿದೆ. ಈ ನಿಟ್ಟಿನಲ್ಲಿ ಪ್ರತಿಯೊಬ್ಬರೂ ಕಾರ್ಯೋನ್ಮುಖರಾಗಬೇಕು ಎಂದರು.

ಉಡುಪಿ ವಲಯ ಅರಣ್ಯಾಧಿಕಾರಿ ಕ್ಲಿಫರ್ಡ್ ಲೋಬೋ ಮಾತನಾಡಿ, ಅರಣ್ಯ ಇಲಾಖೆ ವತಿಯಿಂದ ಇಂದಿನಿಂದ 2 ತಿಂಗಳ ಕಾಲ ಜಿಲ್ಲೆಯಾದ್ಯಂತ ಗಿಡ ನೆಡುವ ಅಭಿಯಾನ ನಡೆಯಲಿದೆ. ಸಾರ್ವಜನಿಕರು ಗಿಡ ಮರಗಳನ್ನು ರಕ್ಷಿಸಬೇಕು ಎಂದರು.

ಕಾರ್ಯಕ್ರಮದಲ್ಲಿ ಅರಣ್ಯ ಇಲಾಖೆಯ ಸಿಬ್ಬಂದಿಗಳು ಮತ್ತು ಮಠದ ಸಿಬ್ಬಂದಿಗಳು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News