ಸಾಯ, ಚವರ್ಕಾಡ್ ನಿವಾಸಿಗಳಿಗೆ ಕೇರಳಕ್ಕೆ ಹೋಗಲು ಅನುಮತಿ ನೀಡಲು ಒತ್ತಾಯಿಸಿ ಡಿವೈಎಫ್ಐ ಮನವಿ

Update: 2020-06-06 07:49 GMT

ಮಂಗಳೂರು: ಕೇರಳ ರಾಜ್ಯ ಕಾಸರಗೋಡು ಜಿಲ್ಲೆಯ ಕರ್ನಾಟಕ ಗಡಿಭಾಗದ ಸಾಯ ಮತ್ತು ಚವರ್ಕಾಡ್ ಪ್ರದೇಶದ ನಿವಾಸಿಗಳಿಗೆ ಕರ್ನಾಟಕದ ಚೆಕ್ ಪೋಸ್ಟ್ ಮೂಲಕ ಕೇರಳಕ್ಕೆ ಹೋಗಲು ಅನುಮತಿ ನೀಡುವಂತೆ ಒತ್ತಾಯಿಸಿ ಇಂದು ಡಿವೈಎಫ್ಐ ದ.ಕ ಜಿಲ್ಲಾ ಸಮಿತಿ ವತಿಯಿಂದ ಜಿಲ್ಲಾಧಿಕಾರಿ ಮತ್ತು ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿಗಳಿಗೆ ಮನವಿ ನೀಡಲಾಯಿತು. 

ನಿಯೋಗದಲ್ಲಿ ಡಿವೈಎಫ್ಐ ಜಿಲ್ಲಾ ಕಾರ್ಯದರ್ಶಿ ಸಂತೋಷ್ ಬಜಾಲ್, ಬಂಟ್ವಾಳ ತಾಲೂಕು ಕಾರ್ಯದರ್ಶಿ ನ್ಯಾಯವಾದಿ ತುಳಸೀದಾಸ್ ವಿಟ್ಲ, ಕಾರ್ಮಿಕ ಮುಖಂಡರಾದ ರಾಮಣ್ಣ ವಿಟ್ಲ, ವಿಟ್ಲ ವಲಯ ಸಮಿತಿ ಅಧ್ಯಕ್ಷ ನುಜುಂ ಅಳಿಕೆ, ತಮೀಮ್ ಮುಂತಾದವರು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News