ಚಿಕ್ಕಮಗಳೂರು ಜಿಲ್ಲೆ ಕೊರೋನ ಮುಕ್ತ: ಜಿಲ್ಲಾಧಿಕಾರಿ ಡಾ.ಬಗಾದಿ ಗೌತಮ್

Update: 2020-06-06 08:14 GMT

ಚಿಕ್ಕಮಗಳೂರು: ಜಿಲ್ಲೆಯಲ್ಲಿ ಇದುವರೆಗೆ ಪಾಸಿಟಿವ್ ಬಂದಿದ್ದ ಎಲ್ಲಾ ಕೊರೋನ ಸೋಂಕಿತರು ಸಂಪೂರ್ಣ ಗುಣಮುಖರಾಗಿದ್ದು, ಈ ಮೂಲಕ ಜಿಲ್ಲೆ ಮತ್ತೆ ಕೊರೋನ ಮುಕ್ತವಾಗಿದೆ ಎಂದು ಜಿಲ್ಲಾಧಿಕಾರಿ ಡಾ.ಬಗಾದಿ ಗೌತಮ್ ತಿಳಿಸಿದ್ದಾರೆ.

ಜಿಲ್ಲೆಯಲ್ಲಿ ಇತ್ತೀಚೆಗೆ ದಾಖಲಾಗಿದ್ದ 18 ಪ್ರಕರಣಗಳ ಪೈಕಿ ಎರಡು ಪ್ರಕರಣ ಫಾಲ್ಸ್ ಪಾಸಿಟಿವ್ ಬಂದಿದೆ. ಉಳಿದ 16 ಮಂದಿ ಕೊರೋನ ಸೋಂಕಿತರಲ್ಲಿ‌ ಕಳೆದ ವಾರ ಎಂಟು ಮಂದಿ ಗುಣಮುಖರಾಗಿದ್ದು, ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಗಿತ್ತು, ಶನಿವಾರ ಉಳಿದ ಸೋಂಕಿತರೂ ಗುಣಮುಖರಾಗಿದ್ದು ಎಲ್ಲರನ್ನೂ ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.

ಜಿಲ್ಲೆಯಲ್ಲಿ ಇತ್ತೀಚೆಗೆ ವರದಿಯಾಗಿದ್ದ ಎಲ್ಲ 16 ಮಂದಿ ಸೋಂಕಿತರು ಹೊರ ರಾಜ್ಯಗಳಿಂದ ಬಂದವರಾಗಿದ್ದು, ಈ ಪೈಕಿ ನಾಲ್ವರು 17 ವರ್ಷಕ್ಕಿಂತ ಕೆಳಗಿನವರಾಗುದ್ದರು. ಇದೀಗ ಎಲ್ಲ‌ ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿರುವುದರಿಂದ ಹಾಗೂ ಜಿಲ್ಲೆಯಲ್ಲಿ ಹೊಸದಾಗಿ ಯಾವುದೇ ಕೊರೋನ ಸೋಂಕಿನ ಪ್ರಕರಣಗಳು ಪತ್ತೆಯಾಗದ ಹಿನ್ನೆಲೆಯಲ್ಲಿ ಚಿಕ್ಕಮಗಳೂರು ಮತ್ತೆ ಕೊರೋನ ಸೋಂಕು ಮುಕ್ತವಾದಂತಾಗಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.

Full View

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News