ಅಭಿವೃದ್ಧಿ ಮಾದರಿಯ‌ ಮೂಲಕವೇ ನಾಡು ಕಟ್ಟಿದ ದೇವರಾಜ ಅರಸು ನಮ್ಮೆಲ್ಲರ‌ ಆದರ್ಶ: ಸಿದ್ದರಾಮಯ್ಯ

Update: 2020-06-06 08:52 GMT

ಬೆಂಗಳೂರು, ಜೂ.6: ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು ಅವರ 38ನೇ ಪುಣ್ಯಸ್ಮರಣೆಯ ಅಂಗವಾಗಿ ಮಾಜಿ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ, ಹೆಚ್.ಡಿ ಕುಮಾರಸ್ವಾಮಿ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅವರು ಟ್ವೀಟ್ ಮೂಲಕ ನಮನ ಸಲ್ಲಿಸಿದ್ದಾರೆ.

"ಸಾಮಾಜಿಕ ನ್ಯಾಯದ ಹಳಿಯ ಮೇಲೆ ಅಭಿವೃದ್ಧಿಯ ಬಂಡಿಯನ್ನು ಓಡಿಸುವ ಹೊಸ ಅಭಿವೃದ್ಧಿ ಮಾದರಿಯ‌ ಮೂಲಕವೇ ನಾಡು ಕಟ್ಟಿದ ಮಾಜಿ ಮುಖ್ಯಮಂತ್ರಿ, ಮುತ್ಸದ್ದಿ ನಾಯಕ ಡಿ.ದೇವರಾಜ ಅರಸು ನಮ್ಮೆಲ್ಲರ‌ ಆದರ್ಶ. ಈ ಪರಿವರ್ತನೆಯ ಹರಿಕಾರನಿಗೆ ಪುಣ್ಯಸ್ಮರಣೆಯ ದಿನದ ಗೌರವಪೂರ್ವಕ ನಮನ" ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

ರಾಜ್ಯದ ಬಡವರ, ಶೋಷಿತರ ಪರವಾಗಿ ಹಲವಾರು ಜನಪರ ಯೋಜನೆಗಳನ್ನು ಜಾರಿಗೆ ತಂದ ಸಾಮಾಜಿಕ ನ್ಯಾಯದ ಹರಿಕಾರ, ಮಾಜಿ ಮುಖ್ಯಮಂತ್ರಿಗಳಾದ ಡಿ.ದೇವರಾಜ ಅರಸು ಅವರ ಪುಣ್ಯಸ್ಮರಣೆಯಂದು ಅವರನ್ನು‌ ಗೌರವ ಪೂರ್ವಕವಾಗಿ ನೆನೆಯುತ್ತೇನೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಟ್ವೀಟ್ ಮಾಡಿದ್ದಾರೆ.

ರಾಜ್ಯದಲ್ಲಿ ಸಾಮಾಜಿಕ ನ್ಯಾಯಕ್ಕೆ ಮುನ್ನುಡಿ ಬರೆದ ಧೀಮಂತ ರಾಜಕಾರಣಿ ಮಾಜಿ ಮುಖ್ಯಮಂತ್ರಿ ಡಿ. ದೇವರಾಜ ಅರಸು ಅವರ ಪುಣ್ಯಸ್ಮರಣೆಯ ದಿನವಾದ ಇಂದು ಅವರನ್ನು ಗೌರವಪೂರ್ವಕವಾಗಿ ಸ್ಮರಿಸುತ್ತೇನೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ ಟ್ವೀಟ್ ಮೂಲಕ ನಮನ ಸಲ್ಲಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News