ಮೈಸೂರು: ಯುವತಿಯ ಅತ್ಯಾಚಾರ ಆರೋಪ; ಧರ್ಮಗುರು ಬಂಧನ

Update: 2020-06-06 11:39 GMT

ಮೈಸೂರು, ಜೂ.6: ಮಸೀದಿಯಲ್ಲಿ ದೇವರಿಗೆ ವಿಶೇಷ ಪ್ರಾರ್ಥನೆ ಸಲ್ಲಿಸಿದರೆ ವಿವಾಹವಾಗುತ್ತದೆ ಎಂದು ಯುವತಿಯೋರ್ವಳನ್ನು ನಂಬಿಸಿ ಧರ್ಮಗುರುವೊಬ್ಬ ಆಕೆಯ ಮೇಲೆ ಅತ್ಯಾಚಾರವೆಸಗಿದ್ದಾನೆ ಎನ್ನಲಾದ ಘಟನೆ ಮೈಸೂರು ಜಿಲ್ಲೆಯ ಹುಣಸೂರು ತಾಲೂಕಿನಲ್ಲಿ ವರದಿಯಾಗಿದ್ದು, ಆರೋಪಿಯನ್ನು ಬಂಧಿಸಲಾಗಿದೆ.

ಯುವತಿಯನ್ನು ಹುಣಸೂರಿನ ಲಾಲ್ ಬನ್ ಬೀದಿಯ ನಿವಾಸಿ ಐರಿಗೆ ಗ್ರಾಮದ ಧರ್ಮಗುರು ಜಬೀವುಲ್ಲಾ ಎಂಬಾತ ಅತ್ಯಾಚಾರ ಎಸಗಿದ್ದಾನೆ ಎಂದು ಆರೋಪಿಸಲಾಗಿದೆ.

ತನ್ನ ಪರಿಚಿತಳಾಗಿದ್ದ ಈ ಯುವತಿಗೆ ಉತ್ತಮ ವರ ಸಿಗಬೇಕಾದರೆ ವಿಶೇಷ ಪ್ರಾರ್ಥನೆ ಮಾಡುತ್ತೇನೆ ಎಂದು ನಂಬಿಸಿದ್ದ ಜಬೀವುಲ್ಲಾ, ಈ ಮೂಲಕ ಯುವತಿಯ ವಿಶ್ವಾಸಗಳಿಸಿಕೊಂಡಿದ್ದ. ನಂತರ ಈ ನೆಪದಲ್ಲಿ ಯುವತಿಯ ಮೇಲೆ ಅತ್ಯಾಚಾರ ಎಸಗಿದ್ದಾನೆ ಎನ್ನಲಾಗಿದೆ.

ಘಟನೆಯಿಂದ ನೊಂದ ಯುವತಿ ತನ್ನ ತಂದೆಗೆ ಈ ಬಗ್ಗೆ ವಿಷಯ ತಿಳಿಸಿದ್ದಾಳೆ. ಯುವತಿಯ ತಂದೆ ಹುಣಸೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಧರ್ಮಗುರು ವಿರುದ್ಧ ದೂರು ದಾಖಲಿಸಿದ್ದು, ಆರೋಪಿಯನ್ನು ಬಂಧಿಸಿ ನ್ಯಾಯಲಯಕ್ಕೆ ಹಾಜರು ಪಡಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News