ಜೂ.9ರಂದು ಆರೋಗ್ಯ ಸಚಿವ ಶ್ರೀರಾಮುಲು ಉಡುಪಿಗೆ

Update: 2020-06-06 16:44 GMT

ಉಡುಪಿ, ಜೂ.6: ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಸಚಿವ ಬಿ.ಶ್ರೀರಾಮುಲು ಅವರು ಜೂ.9ರ ಮಂಗಳವಾರ ಉಡುಪಿ ಜಿಲ್ಲೆಗೆ ಭೇಟಿ ನೀಡಲಿದ್ದಾರೆ.

ಜೂ.9ರ ಮಂಗಳವಾರ ಅಪರಾಹ್ನ 3:00ಕ್ಕೆ ಕಾರವಾರದಿಂದ ಉಡುಪಿಗೆ ಆಗಮಿಸುವ ಶ್ರೀರಾಮುಲು, ಜಿಲ್ಲಾಧಿಕಾರಿ ಕಚೇರಿಯಲ್ಲಿ ಅಧಿಕಾರಿಗಳೊಂದಿಗೆ ಕೋವಿಡ್-19 ಕುರಿತು ಸಭೆ ನಡೆಸಲಿದ್ದಾರೆ. ಸಂಜೆ 4:30ಕ್ಕೆ ಅಜ್ಜರಕಾಡಿನ ಜಿಲ್ಲಾಸ್ಪತ್ರೆಗೆ ಭೇಟಿ ನೀಡುವ ಸಚಿವರು, ರಾತ್ರಿ ಉಡುಪಿಯಲ್ಲಿ ವಾಸ್ತವ್ಯ ಮಾಡುವರು. ಮರುದಿನ ಬೆಳಗ್ಗೆ 8:00ಕ್ಕೆ ಮಡಿಕೇರಿಗೆ ತೆರಳುವರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News