ಪರಿಸರ ದಿನಾಚರಣೆಯ ಅಂಗವಾಗಿ ಡಿವೈಎಫ್ಐ ನಿಂದ ಗಿಡ ವಿತರಣೆ
Update: 2020-06-07 17:35 IST
ಮಂಗಳೂರು : ವಿಶ್ವ ಪರಿಸರ ದಿನಾಚರಣೆಯ ಅಂಗವಾಗಿ ಡಿವೈಎಫ್ಐ ಬಂಟ್ವಾಳ ತಾಲೂಕು ಸಮಿತಿಯಿಂದ ಬಂಟ್ವಾಳ ಕೆಳಗಿನ ಮಂಡಾಡಿಯಲ್ಲಿ ಗಿಡಗಳ ವಿತರಣಾ ಕಾರ್ಯಕ್ರಮ ನಡೆಯಿತು.
ಕಾರ್ಯಕ್ರಮವನ್ನುದ್ದೇಶಿಸಿ ಸಾಮಾಜಿಕ ಕಾರ್ಯಕರ್ತರಾದ ರಾಜ ಚೆಂಡ್ತಿಮಾರ್ ಮಾತನಾಡಿ ಪ್ರತಿಯೊಬ್ಬರೂ ತಮ್ಮ ತಮ್ಮ ಮನೆ ಹಿತ್ತಲು ಮತ್ತು ಪರಿಸರಗಳಲ್ಲಿ ಗಿಡ ನೆಡಬೇಕು ಆ ಮೂಲಕ ಪ್ರಕೃತಿಯನ್ನು ಉಳಿಸಲು ಮುಂದಾಗಬೇಕೆಂದು ಕರೆ ನೀಡಿದರು.
ಕಾರ್ಯಕ್ರಮದಲ್ಲಿ ಡಿ.ವೈ.ಎಫ್.ಐ ತಾಲೂಕು ಕಾರ್ಯದರ್ಶಿ ನ್ಯಾಯವಾದಿ ತುಳಸೀದಾಸ್ ವಿಟ್ಲ , ಉಪಾಧ್ಯಕ್ಷ ಸಾಧಿಕ್ ಬಂಟ್ವಾಳ, ದೇವದಾಸ್ ಕುಲಾಲ್, ಕಾರ್ಮಿಕ ಮುಖಂಡರಾದ ಉದಯ ಕುಮಾರ್ ಬಂಟ್ವಾಳ, ರಾಮಣ್ಣ ವಿಟ್ಲ, ಪ್ರಭಾಕರ ದೈವಗುಡ್ಡೆ ಮುಂತಾದವರು ಉಪಸ್ಥಿತರಿದ್ದರು.
ಡಿವೈಎಫ್ಐ ಬಂಟ್ವಾಳ ತಾಲೂಕು ಅಧ್ಯಕ್ಷ ಸುರೇಂದ್ರ ಕೋಟ್ಯಾನ್ ಸ್ವಾಗತಿಸಿ, ಕೊನೆಯಲ್ಲಿ ವಂದಿಸಿದರು. ಬಂಟ್ವಾಳ ಪರಿಸರದ ನಾಗರಿಕರಿಗೆ ಸಸಿಗಳನ್ನು ವಿತರಿಸಲಾಯಿತು.