ಕೊರೋನ ಸೋಂಕಿನಿಂದ ಬಿಬಿಎಂಪಿ ಸದಸ್ಯ ಇಮ್ರಾನ್ ಪಾಷಾ ಗುಣಮುಖ

Update: 2020-06-07 12:55 GMT

ಬೆಂಗಳೂರು, ಜೂ.7: ಕೊರೋನ ಸೋಂಕಿನಿಂದಾಗಿ ಆಸ್ಪತ್ರೆಗೆ ಸೇರಿದ್ದ ಪಾದರಾಯನಪುರದ ಕಾರ್ಪೋರೇಟರ್ ಇಮ್ರಾನ್ ಪಾಷಾ ಸಂಪೂರ್ಣವಾಗಿ ಗುಣಮುಖರಾಗಿರುವ ಹಿನ್ನಲೆಯಲ್ಲಿ ವೈದ್ಯರು ಅವರನ್ನು ರವಿವಾರ ಕೋವಿಡ್-19 ಚಿಕಿತ್ಸಾ ಕೇಂದ್ರದಿಂದ ಬಿಡುಗಡೆ ಮಾಡಿದ್ದಾರೆ.

ಪಾದರಾಯನಪುರದ ಕಾರ್ಪೋರೇಟರ್ ಇಮ್ರಾನ್ ಪಾಷಾಗೆ ಕಳೆದ ಹಲವು ದಿನಗಳ ಹಿಂದೆ ಕೊರೋನ ಸೋಂಕು ತಗಲಿತ್ತು. ಈ ಬಳಿಕ ಅವರಿಗೆ ಕೋವಿಡ್-19 ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿತ್ತು.

ಇಮ್ರಾನ್ ಪಾಷಾ ಅವರಿಗೆ ನಿರಂತರವಾಗಿ ಚಿಕಿತ್ಸೆ ನೀಡಿದ್ದರಿಂದ ಅವರು ಸಂಪೂರ್ಣವಾಗಿ ಗುಣಮುಖರಾಗಿದ್ದಾರೆ. ಹೀಗಾಗಿ ಅವರನ್ನು ರವಿವಾರ ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಗಿದೆ. ಕೊರೋನದಿಂದ ಗುಣಮುಖರಾಗಿ ಬಂದ ಇಮ್ರಾನ್‍ಗೆ ಬೆಂಬಲಿಗರು, ಅಭಿಮಾನಿಗಳು ಹೂವಿನ ಮಳೆ ಸುರಿಸಿ ಬರ ಮಾಡಿಕೊಂಡರು. ಇದಾದ ಬಳಿಕ ಇಮ್ರಾನ್ ಪಾಷಾ ಅವರು ಏಳು ದಿನ ಹೋಮ್ ಕ್ವಾರಂಟೈನ್‍ನಲ್ಲಿರಬೇಕು ಎಂದು ಜಿಲ್ಲಾಡಳಿತ ಸೂಚನೆ ನೀಡಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News