ಸಾಲಬಾಧೆ: ರೈತ ಆತ್ಮಹತ್ಯೆ

Update: 2020-06-07 18:25 GMT

ವಿಜಯಪುರ, ಜೂ.7: ಸಾಲಬಾಧೆ ಕಾರಣದಿಂದಾಗಿ ರೈತ ಆತ್ಮಹತ್ಯೆ ಮಾಡಿಕೊಂಡ ಘಟನೆ ಸಿಂದಗಿ ತಾಲೂಕಿನ ಹಡಗಿನಾಳ ಗ್ರಾಮದಲ್ಲಿ ನಡೆದಿದೆ ಎಂದು ವರದಿಯಾಗಿದೆ.

ಗಂಗಪ್ಪ ಅಪ್ಪಣ ಶಿರಶ್ಶಾಡ(30) ಮೃತ ರೈತ ಎಂದು ಪೊಲೀಸರು ಗುರುತಿಸಿದ್ದಾರೆ.

ರವಿವಾರ ಗಂಗಪ್ಪ ಅಪ್ಪಣ ಶಿರಶ್ಕಾಡ ಅವರು, ತಮ್ಮ ಮನೆ ಸಮೀಪದ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.

3 ಎಕರೆ 15 ಗುಂಟೆ ಜಮೀನು ಹೊಂದಿರುವ ಗಂಗಪ್ಪ ಅವರು ಬೆಳೆಗಾಗಿ ಗುಬ್ಬೇವಾಡ ಕರ್ನಾಟಕ ವಿಕಾಸ್ ಗ್ರಾಮೀಣ ಬ್ಯಾಂಕ್ ಶಾಖೆಯಲ್ಲಿ 1.50 ಲಕ್ಷ ರೂ. ಸಾಲ ಮಾಡಿಕೊಂಡಿದ್ದರು ಎಂಬ ಮಾಹಿತಿ ದೊರೆತಿದೆ. ಈ ಸಂಬಂಧ ಕಲಕೇರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News