ಅಪರಿಚಿತ ವಾಹನ ಢಿಕ್ಕಿ: ಪಾದಚಾರಿ ಮೃತ್ಯು

Update: 2020-06-09 16:49 GMT

ಕುಂದಾಪುರ, ಜೂ.9: ತಲ್ಲೂರು ಗ್ರಾಮದ ಪ್ರವಾಸಿ ಹೊಟೇಲ್ ಹತ್ತಿರ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಜೂ.8ರಂದು ಮಧ್ಯಾಹ್ನ 1:15ರ ಸುಮಾರಿಗೆ ಅಪರಿಚಿತ ವಾಹನ ಢಿಕ್ಕಿ ಹೊಡೆದ ಪರಿಣಾಮ ರಸ್ತೆ ಬದಿ ನಡೆದುಕೊಂಡು ಹೋಗುತ್ತಿದ್ದ ವ್ಯಕ್ತಿಯೊಬ್ಬರು ಮೃತಪಟ್ಟ ಬಗ್ಗೆ ವರದಿಯಾಗಿದೆ.

ಕುಂದಾಪುರ ಕಡೆಯಿಂದ ಬೈಂದೂರು ಕಡೆಗೆ ಹೋಗುತ್ತಿದ್ದ ಅಪರಿಚಿತ ವಾಹನ, ಅತೀವೇಗ ಮತ್ತು ನಿರ್ಲಕ್ಷತನದಿಂದ ಬಂದು, ರಸ್ತೆಯ ಬದಿಯಲ್ಲಿ ನಡೆದುಕೊಂಡು ಕುಂದಾಪುರ ಕಡೆಗೆ ಹೋಗುತ್ತಿದ್ದ ರಾಜು ಪೂಜಾರಿಗೆ ಡಿಕ್ಕಿ ಹೊಡೆಯಿತ್ತೆನ್ನಲಾಗಿದೆ. ಇದರ ಪರಿಣಾಮ ಗಂಭೀರವಾಗಿ ಗಾಯ ಗೊಂಡ ಅವರು ಸ್ಥಳದಲ್ಲಿಯೇ ಮೃತಪಟ್ಟರು. ಅಪಘಾತಪಡಿಸಿದ ವಾಹನ ನಿಲ್ಲಿಸದೆ ಪರಾರಿಯಾಗಿದೆ. ಈ ಬಗ್ಗೆ ಕುಂದಾಪುರ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News