ಮಡಿಕೇರಿ: ಗುಂಡು ಹಾರಿಸಿಕೊಂಡು ನಿವೃತ್ತ ಸೈನಿಕ ಆತ್ಮಹತ್ಯೆ
Update: 2020-06-11 11:50 GMT
ಮಡಿಕೇರಿ, ಜೂ.11: ನಿವೃತ್ತ ಸೈನಿಕರೊಬ್ಬರು ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ನಾಪೋಕ್ಲುವಿನಲ್ಲಿ ಗುರುವಾರ ಮುಂಜಾನೆ ನಡೆದಿದೆ.
ಇಲ್ಲಿನ ಚೋನಕೆರೆ ಎಂಬಲ್ಲಿನ ನಿವಾಸಿ ಚಿಯಕಪೂವಂಡ ಉತ್ತಯ್ಯ(74) ಎಂಬವರೇ ಆತ್ಮಹತ್ಯೆಗೆ ಶರಣಾಗಿದ್ದು, ಗುರುವಾರ ಬೆಳಗ್ಗೆ ತಮ್ಮ ಕೊಠಡಿಯಲ್ಲಿ ಗುಂಡು ಹೊಡೆದುಕೊಂಡು ಸಾವಿಗೀಡಾಗಿದ್ದಾಗಿ ಹೇಳಲಾಗಿದೆ.
ಅನಾರೋಗ್ಯವೇ ಆತ್ಮಹತ್ಯೆಗೆ ಕಾರಣವೆಂದು ಹೇಳಲಾಗುತ್ತಿದ್ದು, ಮೃತರು ಪತ್ನಿ ಹಾಗೂ ಐದು ಮಂದಿ ಮಕ್ಕಳನ್ನು ಅಗಲಿದ್ದಾರೆ. ವೃತ್ತ ನಿರೀಕ್ಷಕ ದಿವಾಕರ್, ನಾಪೋಕ್ಲು ಠಾಣಾಧಿಕಾರಿ ಆರ್. ಕಿರಣ್ ಹಾಗೂ ಸಿಬ್ಬಂದಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ.