ಕೊಳ್ಳೇಗಾಲ: ಮಗುವನ್ನು ಕೊಲೆಗೈದು ಆತ್ಮಹತ್ಯೆಗೆ ಶರಣಾದ ತಾಯಿ

Update: 2020-06-12 13:18 GMT

ಕೊಳ್ಳೇಗಾಲ, ಜೂ.12: ತಾಯಿಯೋರ್ವಳು ಮಗುವನ್ನು ಕೊಂದ ಬಳಿಕ ತಾನೂ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ ತಾಲೂಕಿನ ಪಾಳ್ಯ ಗ್ರಾಮದಲ್ಲಿ ಇಂದು ನಡೆದಿದೆ.

ಸಂಗೀತಾ (23) ಆತ್ಮಹತ್ಯೆಗೆ ಶರಣಾದ ಮಹಿಳೆ. 3 ವರ್ಷದ ಮಗ ಕರಣ್ ನನ್ನು ಹತ್ಯೆಗೈದ ಸಂಗೀತಾ, ಬಳಿಕ ನೀರಿಗೆ ಹಾರಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಸಂಗೀತಾ ಬೆಂಗಳೂರು ನಿವಾಸಿಯಾಗಿದ್ದು, 6 ವರ್ಷಗಳ ಹಿಂದೆ ಮಂಜು ಎಂಬಾತನೊಂದಿಗೆ ಪ್ರೇಮ ವಿವಾಹವಾಗಿದ್ದಳು ಎಂದು ಕುಟುಂಬ ಮೂಲಗಳು ತಿಳಿಸಿವೆ.

ಇಂದು ಬೆಳಗ್ಗೆ ಗ್ರಾಮದ ಮಹದೇಶ್ವರ ದೇಗುಲಕ್ಕೆ ತೆರಳುತ್ತೇನೆಂದು ಹೇಳಿ ಸಂಗೀತಾ ಮನೆಯಿಂದ ತೆರಳಿದ್ದಳು ಎನ್ನಲಾಗಿದ್ದು, ಬಳಿಕ ಕೃತ್ಯ ಎಸಗಿದ್ದಾಳೆ ಎಂದು ತಿಳಿದುಬಂದಿದೆ. ಸಾವಿಗೆ ಕಾರಣ ನಿಗೂಢವಾಗಿದೆ. ಕೊಳ್ಳೇಗಾಲ ಗ್ರಾಮಾಂತರ ಸಿಪಿಐ ಶ್ರೀಕಾಂತ್ ಸ್ಥಳಕ್ಕೆ ಭೇಟಿ ನೀಡಿ, ಶವಗಳನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ. ಘಟನೆ ಸಂಬಂಧ ಕೊಳ್ಳೇಗಾಲ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News