ಬೆಂಗಳೂರು: ಪ್ರೀತಿ ವಿಚಾರದಲ್ಲಿ ಜಗಳ; ಯುವಕರಿಬ್ಬರಿಂದ ಹಲ್ಲೆಗೊಳಗಾಗಿದ್ದ ವಿದ್ಯಾರ್ಥಿನಿ ಸಾವು

Update: 2020-06-12 13:52 GMT

ಬೆಂಗಳೂರು, ಜೂ.12: ಪ್ರೀತಿ ವಿಚಾರದಲ್ಲಿ ಕಿತ್ತಾಡಿಕೊಂಡು ಯುವಕರಿಬ್ಬರು ನಡೆಸಿದ ಹಲ್ಲೆಯಿಂದ ಗಂಭೀರವಾಗಿ ಗಾಯಗೊಂಡಿದ್ದ ಇಂಜಿನಿಯರಿಂಗ್ ವಿದ್ಯಾರ್ಥಿನಿ ಸಾವನ್ನಪ್ಪಿರುವ ಘಟನೆ ಸೋಲದೇವನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಚಿಕ್ಕಬಾಣಾವರದ ಸಿರದೇನಹಳ್ಳಿಯ ಮೋನಿಕಾ(21) ಮೃತಪಟ್ಟ ವಿದ್ಯಾರ್ಥಿನಿ ಎಂದು ತಿಳಿದುಬಂದಿದೆ.

ವಿದ್ಯಾರ್ಥಿನಿ ಮೇಲೆ ಹಲ್ಲೆ ನಡೆಸಿದ ಇಂಜಿನಿಯರಿಂಗ್ ವಿದ್ಯಾರ್ಥಿಗಳಾದ ಬಬಿತ್ ಹಾಗೂ ರಾಹುಲ್ ಅವರನ್ನು ಈಗಾಗಲೇ ಬಂಧಿಸಲಾಗಿದ್ದು, ಅವರ ಮೇಲೆ ಕೊಲೆ ಪ್ರಕರಣ ದಾಖಲಿಸಲಾಗಿದೆ ಎಂದು ಡಿಸಿಪಿ ಶಶಿಕುಮಾರ್ ತಿಳಿಸಿದ್ದಾರೆ.

ಏನಿದು ಪ್ರಕರಣ?: ಕಳೆದ ಜೂ.7 ರಂದು ಮಧ್ಯಾಹ್ನ ಪ್ರೀತಿ ವಿಚಾರದಲ್ಲಿ ಜಗಳವಾಡಿಕೊಂಡಿದ್ದ ರಾಹುಲ್ ಹಾಗೂ ಬಬಿತ್, ಮೂರನೆ ವರ್ಷದ ಇಂಜಿನಿಯರಿಂಗ್ ಆರ್ಕಿಟೆಕ್ ವಿದ್ಯಾರ್ಥಿನಿ ಮೋನಿಕಾ ಮೇಲೆ ಹಲ್ಲೆ ನಡೆಸಿದ್ದರು. ಪ್ರಜ್ಞಾಹೀನ ಸ್ಥಿತಿಯಲ್ಲಿ ಬಿದ್ದಿದ್ದ ಆಕೆಯನ್ನು ಸಪ್ತಗಿರಿ ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೆ ಶುಕ್ರವಾರ ಬೆಳಗ್ಗೆ ಮೃತಪಟ್ಟಿದ್ದಾರೆ ಎನ್ನಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News