ಬಜಾಲ್ ವಾರ್ಡ್ ಅಭಿವೃದ್ಧಿ ಕಾಮಗಾರಿಗೆ ಚಾಲನೆ

Update: 2020-06-13 16:51 GMT

ಮಂಗಳೂರು, ಜೂ.13: ಮಂಗಳೂರು ಮಹಾನಗರ ಪಾಲಿಕೆಯ ಬಜಾಲ್ ವಾರ್ಡಿನ ಜಯನಗರದಲ್ಲಿ ಅಭಿವೃದ್ಧಿ ಕಾಮಗಾರಿಗೆ ಶಾಸಕ ವೇದವ್ಯಾಸ್ ಕಾಮತ್ ಶನಿವಾರ ಚಾಲನೆ ನೀಡಿದರು.

ಬಳಿಕ ಮಾತನಾಡಿದ ಅವರು, ಬಜಾಲ್ ವಾರ್ಡಿನ ಸರ್ವತೋಮುಖ ಅಭಿವೃದ್ಧಿಗೆ ಇಲ್ಲಿನ ಜನರ ಬೇಡಿಕೆಯ ಅನುಸಾರ ವಿವಿಧ ಯೋಜನೆಗಳಿಗೆ ಕೋಟ್ಯಂತರ ರೂಪಾಯಿಯ ಅನುದಾನ ಬಿಡುಗಡೆಗೊಳಿಸಲಾಗಿದೆ ಎಂದರು.

ಬಜಾಲ್ ಜಯನಗರ ಮುಖ್ಯರಸ್ತೆಯಿಂದ ಅಡ್ಡರಸ್ತೆಯ ಬಳಿ ರಸ್ತೆ ಅಭಿವೃದ್ಧಿ, ಚರಂಡಿ ಕಾಮಗಾರಿಗೆ 4 ಲಕ್ಷ ಬಿಡುಗಡೆಗೊಳಿಸಲಾಗಿದೆ. ಈ ವಾರ್ಡಿನ ಸಮಗ್ರ ಅಭಿವೃದ್ಧಿಗೆ ವಿವಿಧ ಯೋಜನೆಗಳನ್ನು ಸಿದ್ಧಪಡಿಸಲಾಗಿದೆ. ಮುಂದಿನ ಅವಧಿಯ ಒಳಗಾಗಿ ಬಜಾಲ್ ವಾರ್ಡನ್ನು ಸಂಪೂರ್ಣವಾಗಿ ಅಭಿವೃದ್ಧಿಪಡಿಸಲಾಗುವುದು ಎಂದರು.

ಈ ಸಂಧರ್ಭ ಮನಪಾ ಸದಸ್ಯರಾದ ಅಶ್ರಫ್, ಬಿಜೆಪಿ ಮುಖಂಡರಾದ ಚಂದ್ರಶೇಖರ ಜಯನಗರ, ಶಿವಾಜಿ ರಾವ್, ವೇಣುಗೋಪಾಲ, ಪ್ರಸಾದ್ ಶೆಟ್ಟಿ, ಚರಿತ್ ಪೂಜಾರಿ, ವೃಂದಾ ಹೆಗಡೆ, ಪುಷ್ಪರಾಜ್ ಮತ್ತಿತರರು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News