ಛತ್ತೀಸ್ ಗಡ: ಹಾಸನದ ಸಿಆರ್‌ಪಿಎಫ್ ಯೋಧ ಹೃದಯಾಘಾತದಿಂದ ಸಾವು

Update: 2020-06-13 16:57 GMT

ಹಾಸನ, ಜೂ.13: ಹಲವು ವರ್ಷಗಳಿಂದ ಛತ್ತೀಸ್ ಗಡದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಯೋಧರೊಬ್ಬರು ಹೃದಯಘಾತದಿಂದ ಸಾವನಪ್ಪಿರುವ ಘಟನೆ ನಡೆದಿದೆ.

ಹಾಸನ ತಾಲೂಕಿನ ಈಚಲಹಳ್ಳಿ ಗ್ರಾಮದ ನಿವಾಸಿ ಹೇಮಂತ್ ಕುಮಾರ್ (42) ಮೃತ ಯೋಧ. ಛತ್ತೀಸ್ ಗಡದ ಸುಕ್ಮಾದಲ್ಲಿ ಯೋಧನಾಗಿ ಕರ್ತವ್ಯದಲ್ಲಿದ್ದಾಗ ಹೇಮಂತ್ ಕುಮಾರ್ ಸಾವನ್ನಪ್ಪಿದ್ದಾರೆ. ಇವರು ಕಳೆದ 19 ವರ್ಷಗಳಿಂದ 150ನೇ ಬೆಟಾಲಿಯನ್ ನ ಸಿಆರ್ ಪಿಎಫ್ ನಲ್ಲಿ ಸೇವೆ ಸಲ್ಲಿಸುತ್ತಿದ್ದರು. 

ಎರಡು ತಿಂಗಳು ಸೇವೆ ಸಲ್ಲಿಸಿ ಬಳಿಕ ನಿವೃತ್ತಿ ಪಡೆದು ಬರುವುದಾಗಿ ಕುಟುಂಬಸ್ಥರಿಗೆ ತಿಳಿಸಿದ್ದರು. ಆದರೆ, ಅವರ ಅಕಾಲಿಕ ಸಾವು ಕುಟುಂಬಸ್ಥರನ್ನು ಶೋಕಸಾಗರದಲ್ಲಿ ಮುಳುಗಿಸಿದೆ. ರವಿವಾರ ಮದ್ಯಾಹ್ನ ಅವರ ಜಮೀನಿನಲ್ಲಿ ಅಂತ್ಯಕ್ರಿಯೆ ನೆರವೇರಲಿದೆ ಎಂದು ತಿಳಿದುಬಂದಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News