ಕುಂಬಳೆ : ನಿಯಂತ್ರಣ ತಪ್ಪಿದ ಕಾರು ಪಲ್ಟಿ ; ಇಬ್ಬರು ಮೃತ್ಯು, ಓರ್ವ ಗಂಭೀರ

Update: 2020-06-14 14:39 GMT

ಮಂಜೇಶ್ವರ : ಕುಂಬಳೆ ಸೀತಾಂಗೋಳಿ ರಸ್ತೆಯ ನಾಯ್ಕಾಪು ಸ್ಕೂಲ್ ಬಳಿ ಕಾರೊಂದು ನಿಯಂತ್ರಣ ತಪ್ಪಿ ಮಗುಚಿ ಬಿದ್ದ ಪರಿಣಾಮ ಇಬ್ಬರು ಮೃತಪಟ್ಟು, ಓರ್ವ ಗಂಭೀರವಾಗಿ ಗಾಯಗೊಂಡ ಘಟನೆ ರವಿವಾರ ಸಂಜೆ ನಡೆದಿದೆ.

ಮೃತರನ್ನು ಕಾಸರಗೋಡು ತಳಂಗರೆ ನಿವಾಸಿ ಮಿದ್ಲಾಜ್ (18), ಕುಂಬಳೆ ಬದ್ರಿಯಾ ನಗರದ ಅಬ್ದುಲ್ ಸಾಲಿ ಅವರ ಪುತ್ರ ಹುಸೈನ್(17) ಎಂದು ಗುರುತಿಸಲಾಗಿದೆ.

ಮುಹಮ್ಮದ್ ಸುಹೈಲ್ ಗಂಭೀರ ಗಾಯಗೊಂಡಿದ್ದು, ಅವರನ್ನು ಕಾಸರಗೋಡಿನ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಬಗ್ಗೆ ಕುಂಬಳೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News