ಮಂಡ್ಯದಲ್ಲಿ ಒಂದೇ ದಿನ ಏಳು ಮಂದಿ ಜಲಸಮಾಧಿ: ಮುಖ್ಯಮಂತ್ರಿಯಿಂದ ಪರಿಹಾರ ಪ್ರಕಟ
ಬೆಂಗಳೂರು, ಜೂ. 15: ಜೂ.14ರಂದು ಮಂಡ್ಯ ಜಿಲ್ಲೆಯಲ್ಲಿ ಮೂರು ಪ್ರತ್ಯೇಕ ಪ್ರಕರಣಗಳಲ್ಲಿ ಜಲಸಮಾಧಿಯಾದ ಏಳು ಮಂದಿಗೆ ಮುಖ್ಯಮಂತ್ರಿ ಪರಿಹಾರ ನಿಧಿಯಿಂದ ಒಟ್ಟು 23 ಲಕ್ಷ ರೂ.ಗಳ ಪರಿಹಾರವನ್ನು ನೀಡಲು ಮುಖ್ಯಮಂತ್ರಿ ಯಡಿಯೂರಪ್ಪ ಇಂದಿಲ್ಲಿ ಸೂಚನೆ ನೀಡಿದ್ದಾರೆ.
ಮಂಡ್ಯ ಜಿಲ್ಲೆ ನಾಗಮಂಗಲ ತಾಲೂಕಿನ ಬೀರನಹಳ್ಳಿಯ ಗೀತಾ, ಕು.ಸವಿತಾ ಹಾಗೂ ಕು.ಸೌಮ್ಯ ಎಂಬವರು ಕಾಲು ಜಾರಿಗೆ ಕೆರೆಗೆ ಬಿದ್ದು ಮೃತಪಟ್ಟಿದ್ದು ಅವರಿಗೆ ತಲಾ 5 ಲಕ್ಷ ರೂ.ನಂತೆ ಪರಿಹಾರ ನೀಡಲಾಗುವುದು.
ಇದೇ ತಾಲೂಕಿನ ಚೋಳಸಂದ್ರ ಗ್ರಾಮದ ರಶ್ಮಿ ಮತ್ತು ಇಂಚರಾ, ಕೆ.ಆರ್.ಪೇಟೆ ತಾಲೂಕಿನ ಹುಳಿ ಗಂಗನಹಳ್ಳಿಯ ಮಾಸ್ಟರ್ ಅಭಿಷೇಕ್ ಮತ್ತು ಆದಿಹಳ್ಳಿಯ ಕುಮಾರ್ ಅವರುಗಳಿಗೆ ತಲಾ 2 ಲಕ್ಷ ರೂ.ಗಳನ್ನು ಪರಿಹಾರ ನಿಧಿಯಿಂದ ನೀಡುವಂತೆ ಮುಖ್ಯಮಂತ್ರಿ ಯಡಿಯೂರಪ್ಪ ನಿರ್ದೇಶನ ನೀಡಿದ್ದಾರೆ ಎಂದು ಸಿಎಂ ಕಚೇರಿ ಪ್ರಕಟಣೆ ತಿಳಿಸಿದೆ.
ಜಲಸಮಾಧಿ: ಮಂಡ್ಯದ ಏಳು ಜನರಿಗೆ ಪರಿಹಾರ
— CM of Karnataka (@CMofKarnataka) June 15, 2020
ಮುಖ್ಯಮಂತ್ರಿ ಶ್ರೀ @BSYBJP ಅವರು, ಮಂಡ್ಯ ಜಿಲ್ಲೆಯಲ್ಲಿ ಮೂರು ಪ್ರತ್ಯೇಕ ಪ್ರಕರಣಗಳಲ್ಲಿ ಜೂನ್ 14 ರಂದು ಜಲಸಮಾಧಿಯಾದ 7 ಮಂದಿಗೆ 'ಮುಖ್ಯಮಂತ್ರಿಗಳ ಪರಿಹಾರ ನಿಧಿ'ಯಿಂದ ಒಟ್ಟು 22 ಲಕ್ಷ ರೂ. ಪರಿಹಾರ ಒದಗಿಸಲು ಸೂಚಿಸಿದ್ದಾರೆ. ನಾಗಮಂಗಲ ತಾಲೂಕು ಬೀರನಹಳ್ಳಿಯ 1/2