ಜೂ.16: ಸಚಿವ ಕೋಟರಿಂದ ಅಹವಾಲು ಸ್ವೀಕಾರ
Update: 2020-06-15 18:32 IST
ಉಡುಪಿ, ಜೂ.15: ರಾಜ್ಯ ಮುಜರಾಯಿ, ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಇಲಾಖೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ಇವರು ಜೂ.16ರ ಮಂಗಳವಾರ ಬೆಳಗ್ಗೆ 10 ರಿಂದ 11 ರವರೆಗೆ ಕುಂದಾಪುರ ತಹಶೀಲ್ದಾರ್ ಕಚೇರಿಯಲ್ಲಿ ಸಾರ್ವಜನಿಕರ ಅಹವಾಲುಗಳನ್ನು ಸ್ವೀಕರಿಸಲಿದ್ದಾರೆ ಎಂದು ಕಚೇರಿಯ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಲಾಗಿದೆ.