ಜಲಮಂಡಳಿಯಿಂದ 14 ಮಂದಿ ಸ್ವಯಂ ಸೇವಕರ ನೇಮಕ

Update: 2020-06-15 17:55 GMT

ಬೆಂಗಳೂರು, ಜೂ.15: ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯಿಂದ ಸ್ವಯಂ ಸೇವಕರಾಗಿ ಕಾರ್ಯನಿರ್ವಹಿಸಲು 14 ಜಲಸೇನಾನಿಗಳ ನೇಮಕಗೊಳಿಸಲಾಗಿದೆ.

ಬೆಂಗಳೂರು ನಗರ ವ್ಯಾಪ್ತಿಯ ಸಾರ್ವಜನಿಕರಿಗೆ ಮಂಡಳಿಯ ಕಾರ್ಯಚಟುವಟಿಕೆಗಳಾದ ನೀರು ಸರಬರಾಜು, ಒಳಚರಂಡಿ ನಿರ್ವಹಣೆ, ನೀರಿನ ಸಂರಕ್ಷಣೆ, ಮಳೆ ನೀರು ಕೊಯ್ಲು ಆಳವಡಿಕೆ ಸಂಸ್ಕರಿಸಿದ ತ್ಯಾಜ್ಯ ನೀರಿನ ಮರು ಬಳಕೆಯ ಬಗ್ಗೆ ಮನೆ ಮನೆಗಳಿಗೆ ತೆರಳಿ ಮಾಹಿತಿ ಒದಗಿಸಲು ಹಾಗೂ ನೀರು, ಒಳಚರಂಡಿಗೆ ಸಂಬಂಧಿಸಿದ ಕುಂದು ಕೊರತೆಗಳನ್ನು ಬಗೆಹರಿಸುವ ಉದ್ದೇಶದಿಂದ ಜಲಮಂಡಳಿಯಿಂದ ಜಲಸೇನಾನಿಗಳಿಗೆ ಪ್ರಮಾಣ ಪತ್ರ ನೀಡಿ ಕಾರ್ಯನಿರ್ವಹಿಸುವಂತೆ ಮಂಡಳಿ ಅಧ್ಯಕ್ಷ ತುಷಾರ್ ಗಿರಿನಾಥ್ ತಿಳಿಸಿದ್ದಾರೆ. 

ಜಲಸೇನಾನಿಗಳು ಯಾವುದೇ ಫಲಾಪೇಕ್ಷೆಯಿಲ್ಲದೆ ಬೆಂಗಳೂರಿನ ನಾಗರಿಕರು ಹಾಗೂ ಮಂಡಳಿ ನಡುವೆ ಸಂಪರ್ಕ ಸೇತುವಾಗಿ ನಿಸ್ವಾರ್ಥ ಸೇವೆ ಸಲ್ಲಿಸಲಿದ್ದಾರೆ. ಇವರ ಬಗ್ಗೆ ಹೆಚ್ಚಿನ ಮಾಹಿತಿಯನ್ನು ಮಂಡಳಿಯ ವೆಬ್‍ಸೈಟ್ ನಲ್ಲಿ ಪಡೆಯಬಹುದಾಗಿದೆ ಎಂದು ಪ್ರಕಟನೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News