ಕಲಬುರಗಿ: ದೇವರಾಜ ಅರಸು ಅಭಿವೃದ್ಧಿ ನಿಗಮದ ಅಧಿಕಾರಿ ನಿವಾಸದ ಮೇಲೆ ಎಸಿಬಿ ದಾಳಿ
Update: 2020-06-16 07:38 GMT
ಕಲಬುರಗಿ, ಜೂ.16: ದೇವರಾಜ ಅರಸು ಅಭಿವೃದ್ಧಿ ನಿಗಮದ ಕಲಬುರಗಿ ಮತ್ತು ಯಾದಗಿರಿ ವ್ಯವಸ್ಥಾಪಕ ಜಗದೇವಪ್ಪ ಮುಗುಟ ಅವರ ನಿವಾಸ, ಕಚೇರಿ ಮೇಲೆ ಮಂಗಳವಾರ ಬೆಳಗ್ಗೆ ಎಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ಜಗದೇವಪ್ಪ ಮುಗುಟ ಅವರ ಕಲಬುರಗಿಯ ಮನೆ, ಕಾಂಪ್ಲೆಕ್ಸ್, ಯಾದಗಿರಿ ಆಫೀಸ್, ಬೀದರ್ ಮನೆ ಮೇಲೆ ಏಕಕಾಲದಲ್ಲಿ ದಾಳಿ ನಡೆಸಿ ದಾಖಲೆಗಳನ್ನು ಪರೀಶಿಲನೆ ಮಾಡಲಾಗುತ್ತಿದೆ. ಕಲಬುರಗಿಯ ಪೂಜಾ ಕಾಲನಿಯಲ್ಲಿರುವ ನಿವಾಸದಲ್ಲಿ ಅಧಿಕಾರಿಗಳು ದಾಖಲೆಗಳನ್ನು ಪರಿಶೀಲನೆ ಮಾಡುತ್ತಿದ್ದಾರೆ.
ಕಲಬುರಗಿ ಮತ್ತು ಯಾದಗಿರಿ ಡಿವೈಎಸ್ಪಿಗಳ ನೇತೃತ್ವದಲ್ಲಿ ದಾಳಿ ನಡೆಸಲಾಗಿದ್ದು, 40ಕ್ಕೂ ಹೆಚ್ಚು ಸಿಬ್ಬಂದಿ ದಾಖಲೆಗಳನ್ನು ಪರಿಶೀಲಿಸುತ್ತಿದ್ದಾರೆ.