ಶಾಂತಾ ಉಡುಪ
Update: 2020-06-16 16:42 GMT
ಉಡುಪಿ, ಜೂ.16: ಸಿಂಡಿಕೇಟ್ ಬ್ಯಾಂಕಿನ ನಿವೃತ್ತ ಡಿಜಿಎಂ ಮತ್ತು ಭಾರತೀಯ ವಿಕಾಸ ಟ್ರಸ್ಟಿನ ಆಡಳಿತ ಟ್ರಸ್ಟಿಯಾಗಿದ್ದ ದಿ. ಕೆ.ಎಂ.ಉಡುಪರ ಪತ್ನಿ ಶಾಂತಾ ಎಂ. ಉಡುಪ (76) ಅಲ್ಪಕಾಲದ ಅಸೌಖ್ಯದಿಂದ ಇಂದು ನಿಧನರಾದರು.
ಕೆ.ಎಂ.ಉಡುಪರ ನಿಧನಾನಂತರ ಶಾಂತಾ ಉಡುಪ ಅವರು ಮಂದಾರ್ತಿ ದುರ್ಗಾಪರಮೇಶ್ವರೀ ಹಿರಿಯ ಪ್ರಾಥಮಿಕ ಶಾಲೆಯ ಅಭಿವೃದ್ಧಿ ಕಾರ್ಯಗಳನ್ನು ನೋಡಿಕೊಂಡಿದ್ದಲ್ಲದೇ, ಕೋವಿಡ್ ಲಾಕ್ಡೌನ್ ಸಂದರ್ಭದಲ್ಲಿ ಅಗತ್ಯ ವಿದ್ದವರಿಗೆ 500ಕ್ಕೂ ಹೆಚ್ಚಿನ ಆಹಾರ ಸಾಮಗ್ರಿಗಳ ಕಿಟ್ಗಳನ್ನು ವಿತರಿಸುವ ಮೂಲಕ ಸಮಾಜಸೇವೆಯಲ್ಲಿ ತೊಡಗಿಸಿಕೊಂಡಿದ್ದರು.
ಶಾಂತಾ ಉಡುಪಿ ಮೂವರು ಪುತ್ರರು, ಓರ್ವ ಪುತ್ರಿ ಮತ್ತು ಅಪಾರ ಬಂಧು ಬಳಗವನ್ನು ಅಗಲಿದ್ದಾರೆ.