ಭೂ ಸುಧಾರಣಾ ಕಾಯ್ದೆ ತಿದ್ದುಪಡಿ: 'ಭೂಮಿ, ಕಾವೇರಿ, ಉದ್ಯೋಗ ಮಿತ್ರ ತಂತ್ರಾಂಶ' ಮಾರ್ಪಾಡಿಗೆ ಸುತ್ತೋಲೆ

Update: 2020-06-16 17:39 GMT

ಬೆಂಗಳೂರು, ಜೂ. 16: ಕೃಷಿ ಭೂಮಿಯನ್ನು ಕೃಷಿಯೇತರ, ಅಂದರೆ ಕೈಗಾರಿಕಾ ಉದ್ದೇಶಕ್ಕಾಗಿ ಭೂ ಸುಧಾರಣಾ ಕಾಯ್ದೆ 1961ರ ಕಲಂ 109ರಡಿಯಲ್ಲಿ ಖರೀದಿಸಲು ಇಚ್ಛಿಸುವ ಕೈಗಾರಿಕೋದ್ಯಮಿಗಳು 'ಉದ್ಯೋಗ ಮಿತ್ರ' ವೆಬ್ ಪೋರ್ಟಲ್ ಮೂಲಕ ಆನ್‍ಲೈನ್‍ನಲ್ಲಿ ಅರ್ಜಿ ಸಲ್ಲಿಸಬೇಕು ಎಂದು ಮಾರ್ಗಸೂಚಿ ಸುತ್ತೋಲೆ ಹೊರಡಿಸಲಾಗಿದೆ.

ಕಾಯ್ದೆ 1961ರ ಕಲಂ 109ರಡಿಯಲ್ಲಿ ಕೈಗಾರಿಕೆ ಉದ್ದೇಶಕ್ಕಾಗಿ ಕೃಷಿ ಭೂಮಿಯನ್ನು ರೈತರಿಂದ ಖರೀದಿಸಲು ಅನುಮೋದನೆಗೊಂಡ ಪ್ರಸ್ತಾವನೆಗಳಿಗೆ ಪರಿಭಾವಿತ ಭೂ ಪರಿರ್ವತನೆಗೆ ಅನುಸರಿಸಬೇಕಾದ ಮಾರ್ಗಸೂಚಿ ಪ್ರಕಟಿಸಲಾಗಿದೆ. ಕಾಯ್ದೆ ತಿದ್ದುಪಡಿ ಹಿನ್ನೆಲೆಯಲ್ಲಿ ಭೂಮಿ ತಂತ್ರಾಂಶ, ಕಾವೇರಿ ತಂತ್ರಾಂಶ ಹಾಗೂ ಕರ್ನಾಟಕ ಉದ್ಯೋಗ ಮಿತ್ರ ತಂತ್ರಾಂಶಗಳಲ್ಲಿ ಅಗತ್ಯ ಮಾರ್ಪಾಡು ಮಾಡತಕ್ಕದ್ದು ಎಂದು ಕಂದಾಯ ಇಲಾಖೆ ಅಧೀನ ಕಾರ್ಯದರ್ಶಿ ವಿ.ಪ್ರಕಾಶ್ ಸುತ್ತೋಲೆ ಹೊರಡಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News