×
Ad

ಗುರುವಾರ ‘ಮಾಸ್ಕ್ ದಿನ’ ಆಚರಣೆ: ಸರಕಾರದ ಆದೇಶ

Update: 2020-06-17 20:48 IST

ಬೆಂಗಳೂರು, ಜೂ.17: ಕೋವಿಡ್-19 ಸೋಂಕು ನಿಯಂತ್ರಿಸಲು ರಾಷ್ಟ್ರೀಯ ನಿರ್ದೇಶನಗಳನ್ನು ಪಾಲಿಸುವುದು ಕಡ್ಡಾಯವಾಗಿದೆ. ಈ ಸೋಂಕು ಹರಡುವಿಕೆಯನ್ನು ನಿಯಂತ್ರಿಸಲು ಮುಖಗವಸು(ಮಾಸ್ಕ್) ಧರಿಸುವುದು, ಸೋಪಿನಿಂದ ಕೈ ತೊಳೆಯುವುದು, ಸ್ಯಾನಿಟೈಸರ್ ಬಳಕೆ ಮತ್ತು ಸುರಕ್ಷಿತ ಅಂತರ ಕಾಯ್ದುಕೊಳ್ಳುವುದು ಅತೀ ಮುಖ್ಯವಾದ ವೈದ್ಯಕಿಯೇತರ ಪಾಲನೆಯಾಗಿದೆ ಎಂದು ರಾಜ್ಯ ಸರಕಾರದ ಮುಖ್ಯ ಕಾರ್ಯದರ್ಶಿ ಟಿ.ಎಂ.ವಿಜಯಭಾಸ್ಕರ್ ತಿಳಿಸಿದ್ದಾರೆ.

ಈ ಕುರಿತು ಜನ ಸಮುದಾಯದಲ್ಲಿ ಹೆಚ್ಚಿನ ಜಾಗೃತಿ ಮೂಡಿಸಲು ರಾಜ್ಯ ಸರಕಾರವು ಜೂ.18ರಂದು ‘ಮಾಸ್ಕ್ ದಿನ’ವನ್ನಾಗಿ ಘೋಷಿಸಲು ನಿರ್ಧರಿಸಿದೆ. ಈ ದಿನ ಜಿಲ್ಲಾ ಮತ್ತು ತಾಲೂಕು ಆಡಳಿತವು ಚುನಾಯಿತ ಪ್ರತಿನಿಧಿಗಳು, ಗಣ್ಯವಕ್ತಿಗಳು, ವೈದ್ಯಕೀಯ ಸಿಬ್ಬಂದಿಗಳನ್ನು ಭಾಗವಹಿಸಿಕೊಂಡು ಪಾದಯಾತ್ರೆಯ ಮೂಲಕ ಜಾಗೃತಿ ಮೂಡಿಸುವಂತೆ ಅವರು ಆದೇಶ ಹೊರಡಿಸಿದ್ದಾರೆ.

ಜಿಲ್ಲಾ, ತಾಲೂಕು, ಕಾರ್ಪೊರೇಷನ್, ಪಂಚಾಯತ್, ಕಂದಾಯ ವ್ಯಾಪ್ತಿಯ ವಾರ್ಡ್‍ಗಳಲ್ಲಿ ಜಿಲ್ಲಾಡಳಿತವು ಕೋವಿಡ್-19 ಸೋಂಕು ಹರಡುವಿಕೆಯನ್ನು ನಿಯಂತ್ರಿಸಲು ರಾಷ್ಟ್ರೀಯ ನಿರ್ದೇಶನಗಳನ್ನು ಪಾಲಿಸುವಲ್ಲಿ ಜಾಗೃತಿ ಮೂಡಿಸಲು ಪಾದಯಾತ್ರೆಯನ್ನು ಕೈಗೊಳ್ಳಬೇಕು. ಜನ ಜಾಗೃತಿ ಮೂಡಿಸುವ ಈ ಪಾದಯಾತ್ರೆ, ಸೇರುವಿಕೆಯಲ್ಲಿ 50 ಜನರಿಗೆ ಮೀರಿ ಒಂದು ನಿರ್ದಿಷ್ಟ ಪ್ರದೇಶಗಳಲ್ಲಿ ಭಾಗವಹಿಸಬಾರದು ಎಂದು ಅವರು ತಿಳಿಸಿದ್ದಾರೆ.

ಪಾದಯಾತ್ರೆಯಲ್ಲಿ ಭಾಗವಹಿಸುವಂತಹವರು ಕಡ್ಡಾಯವಾಗಿ ಮಾಸ್ಕ್ ಅನ್ನು ಧರಿಸಬೇಕು ಹಾಗೂ ಸುರಕ್ಷಿತ ಅಂತರವನ್ನು ಕಡ್ಡಾಯವಾಗಿ ಕಾಯ್ದುಕೊಳ್ಳುವ ಮುಖೇನ ಸಮಾಜಕ್ಕೆ ಮಾದರಿಯಾಗಬೇಕು ಎಂದು ವಿಜಯಭಾಸ್ಕರ್ ಕರೆ ನೀಡಿದ್ದಾರೆ.

ಜನ ಜಾಗೃತಿ ಪಾದಯಾತ್ರೆಯಲ್ಲಿ ಸುರಕ್ಷಿತ ಅಂತರ ಕಾಯ್ದುಕೊಳ್ಳುವಿಕೆ, ಮಾಸ್ಕ್ ಧರಿಸುವಿಕೆ, ಆಗಿಂದಾಗ್ಯೆ ಸೋಪಿನಿಂದ ಕೈ ತೊಳೆಯುವಿಕೆ ಹಾಗೂ ಸ್ಯಾನಿಟೈಸರ್ ಬಳಸುವಿಕೆಯಿಂದ ಆಗುವ ಉಪಯುಕ್ತತೆಯ ಅರಿವನ್ನು ಜನ ಸಾಮಾನ್ಯರಲ್ಲಿ ಜಾಗೃತಿ ಮೂಡಿಸುವುದು ಪರಿಣಾಮಕಾರಿ ಸಂವಹನಕ್ಕಗಿ ಫಲಕಗಳನ್ನು ಬಳಸಬೇಕು ಎಂದು ಅವರು ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News