ವಿಷ ಸೇವಿಸಿ ಆತ್ಮಹತ್ಯೆ
Update: 2020-06-17 16:21 GMT
ಗಂಗೊಳ್ಳಿ, ಜೂ.17: ಹಣದ ಅಡಚಣೆಯಿಂದ ಜೀವನದಲ್ಲಿ ಜಿಗುಪ್ಸೆ ಗೊಂಡು ಜೂ.10ರಂದು ಸಂಜೆ ನಾಡ ಗುಡ್ಡೆಯಂಗಡಿಯ ಕೆ.ಇ.ಬಿ. ಕಚೇರಿಯ ಎದುರು ಮದ್ಯದೊಂದಿಗೆ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿ ಅಸ್ವಸ್ಥಗೊಂಡು ಮಣಿಪಾಲ ಕೆಎಂಸಿ ಆಸ್ಪತ್ರೆ ಯಲ್ಲಿ ದಾಖಲಾಗಿದ್ದ ನಾಡ ಗ್ರಾಮದ ಚುಂಗಿಗುಡ್ಡೆ ನಿವಾಸಿ ದಿನೇಶ್ ಶೆಟ್ಟಿ ಎಂಬವರ ಮಗ ವಿನುತ ಶೆಟ್ಟಿ (30), ಜೂ.16ರಂದು ಮಧ್ಯಾಹ್ನ 2 ಗಂಟೆಗೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.
ಈ ಬಗ್ಗೆ ಗಂಗೊಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.