ಜೋಗಿಬೆಟ್ಟು: ಮೃತ ಯೋಧನಿಗೆ ರಿಫಾಯಿ ಜುಮಾ ಮಸೀದಿ ಎದುರು ಅಂತಿಮ ನಮನ
Update: 2020-06-17 18:52 GMT
ಉಪ್ಪಿನಂಗಡಿ : ಹೃದಯಾಘಾತದಿಂದ ಮೃತಪಟ್ಟ ಭಾರತೀಯ ಸೇನೆಯ ಯೋಧ ಸಂದೇಶ್ ಶೆಟ್ಟಿ (34) ಅವರಿಗೆ ರಿಫಾಯಿ ಜುಮಾ ಮಸೀದಿ ಜೋಗಿಬೆಟ್ಟು ಎದುರು ಮಸೀದಿಯ ಅಧ್ಯಕ್ಷರ ಸಮ್ಮುಖದಲ್ಲಿ ರಾಷ್ಟ್ರಧ್ವಜ ಹಿಡಿದು ಅಂತಿಮ ನಮನ ಸಲ್ಲಿಸಲಾಯಿತು.
ರಜೆಯಲ್ಲಿ ಊರಿಗೆ ಬಂದಿದ್ದ ಅವರು ಸೋಮವಾರವಷ್ಟೇ ಕರ್ತವ್ಯಕ್ಕೆಂದು ಉತ್ತರ ಪ್ರದೇಶದ ಮಥುರಾಕ್ಕೆ ತೆರಳಿದ್ದರು. ಅಲ್ಲಿ ಕ್ವಾರೆಂಟೈನ್ ಕೇಂದ್ರದಲ್ಲಿ ಇರುವಾಗಲೇ ಸಂದೇಶ್ ಹೃದಯಾಘಾತವಾಗಿ ನಿಧನ ಹೊಂದಿದ್ದರು.