ಹರೀಶ್ ಶೆಟ್ಟಿ
Update: 2020-06-18 16:38 GMT
ಮಂಗಳೂರು, ಜೂ.18: ನಗರದ ಕೊಡಿಯಾಲ್ಬೈಲ್ ನಿವಾಸಿ, ಬಿಜೆಪಿ ಕಾರ್ಯಕರ್ತ ಹರೀಶ್ ಶೆಟ್ಟಿ (51) ಅಲ್ಪಕಾಲದ ಅಸೌಖ್ಯದಿಂದ ನಗರದ ಖಾಸಗಿ ಆಸ್ಪತ್ರೆಯಲ್ಲಿ ಗುರುವಾರ ನಿಧನರಾದರು.
ಮೃತರು ತಂದೆ, ತಾಯಿ, ಪತ್ನಿ, ಪುತ್ರ ಹಾಗೂ ಪುತ್ರಿಯನ್ನು ಅಗಲಿದ್ದಾರೆ. ಹರೀಶ್ ಶೆಟ್ಟಿ ಅವರ ನಿಧನಕ್ಕೆ ಶಾಸಕ ವೇದವ್ಯಾಸ ಕಾಮತ್, ಮೇಯರ್ ದಿವಾಕರ ಪಾಂಡೇಶ್ವರ, ಬಿಜೆಪಿ ಮಂಗಳೂರು ನಗರ ದಕ್ಷಿಣ ಮಂಡಲ ಅಧ್ಯಕ್ಷ ವಿಜಯಕುಮಾರ್ ಶೆಟ್ಟಿ, ಸ್ಥಳೀಯ ಕಾರ್ಪೊರೇಟರ್ ಗಳಾದ ಸುಧೀರ್ ಶೆಟ್ಟಿ ಕಣ್ಣೂರು, ಲೀಲಾವತಿ ಪ್ರಕಾಶ್, ಮಾಜಿ ಕಾರ್ಪೊರೇಟರ್ ನವೀನ್ ಚಂದ್ರ ಕೆ. ಮುಂತಾದವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.