ಪಕ್ಷಕ್ಕಾಗಿ ದುಡಿದವರಿಗೆ ಅವಕಾಶ: ನಳಿನ್ ಕುಮಾರ್ ಕಟೀಲ್

Update: 2020-06-18 17:06 GMT

ಬೆಂಗಳೂರು, ಜೂ.18: ಹತ್ತಾರು ವರ್ಷ ಪಕ್ಷದ ಕೆಲಸ ಮಾಡಿದ, ಪಕ್ಷದ ತತ್ವ ಸಿದ್ಧಾಂತ ಮತ್ತು ವಿಚಾರಧಾರೆಗಳ ಮೂಲಕ ಹತ್ತಾರು ಕಾರ್ಯಕರ್ತರನ್ನು ಬೆಳೆಸಿರುವ ಬೆಳ್ತಂಗಡಿ ಕ್ಷೇತ್ರದ ಪ್ರತಾಪ್‍ಸಿಂಹ ನಾಯಕ್ ಹಾಗೂ ಹತ್ತಾರು ವರ್ಷದಿಂದ ಪಕ್ಷದ ಕೆಲಸ ಮಾಡಿ, ಶಾಸಕರಾಗಿ, ಸಚಿವರಾಗಿದ್ದ ಸುನೀಲ್ ವಲ್ಯಾಪುರೆಗೆ ವಿಧಾನಪರಿಷತ್ ಪ್ರವೇಶಿಸಲು ವರಿಷ್ಠರು ಅವಕಾಶ ಮಾಡಿಕೊಟ್ಟಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ತಿಳಿಸಿದರು.

ಗುರುವಾರ ಮಲ್ಲೇಶ್ವರಂನಲ್ಲಿರುವ ಬಿಜೆಪಿ ಕಚೇರಿಯಲ್ಲಿ ವಿಧಾನಪರಿಷತ್ ಚುನಾವಣೆಯ ಅಭ್ಯರ್ಥಿಗಳಿಗೆ ಬಿ.ಫಾರಂ ವಿತರಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಧಾನಿ ನರೇಂದ್ರ ಮೋದಿ ನಾಯಕತ್ವ ಹಾಗೂ ಬಿಜೆಪಿ ವಿಚಾರಧಾರೆ, ತತ್ವ, ಸಿದ್ಧಾಂತ ಒಪ್ಪಿ ರಾಜ್ಯದಲ್ಲಿ ಬಿಜೆಪಿ ಸರಕಾರ ಬರಬೇಕೆಂಬ ಉದ್ದೇಶದಿಂದ ಪಕ್ಷಕ್ಕೆ ಬಂದಿರುವ ಮಾಜಿ ಸಚಿವರಾದ ಎಂಟಿಬಿ ನಾಗರಾಜ್ ಹಾಗೂ ಆರ್.ಶಂಕರ್ ಅವರಿಗೂ ಅವಕಾಶ ಕಲ್ಪಿಸಲಾಗಿದೆ ಎಂದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News