ಸಾಲ ಬಾಧೆ: ರೈತ ಆತ್ಮಹತ್ಯೆಗೆ ಶರಣು

Update: 2020-06-19 16:58 GMT

ಬಾಗಲಕೋಟೆ, ಜೂ.19: ರೈತರೊಬ್ಬರು ಸುಮಾರು ನಾಲ್ಕು ಲಕ್ಷ ರೂ. ಸಾಲವನ್ನು ತೀರಿಸಲಾಗದೆ ಬೇಸತ್ತು ಆತ್ಮಹತ್ಯೆಗೆ ಶರಣರಾಗಿರುವ ಘಟನೆ ಬಾದಾಮಿ ಬಾಗಲಕೋಟೆ ಜಿಲ್ಲೆಯ ಬಾದಾಮಿ ತಾಲೂಕಿನ ತಳಕವಾಡದಲ್ಲಿ ನಡೆದಿದೆ.

ಆತ್ಮಹತ್ಯೆಗೆ ಶರಣಾದವರನ್ನು ಶಂಕರಪ್ಪ(28) ಎಂದು ಗುರುತಿಸಲಾಗಿದೆ. ಆತ್ಮಹತ್ಯೆಗೆ ಶರಣಾದ ರೈತನು ತಳಕವಾಡದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದಲ್ಲಿ 1 ಲಕ್ಷ ರೂ.ಹಾಗೂ ಕುಳಗೇರಿಯ ಕರ್ನಾಟಕ ವಿಕಾಶ ಗ್ರಾಮೀಣ ಬ್ಯಾಂಕ್‍ನಲ್ಲಿ 3 ಲಕ್ಷ ರೂ.ಸಾಲ ಪಡೆದಿದ್ದರು ಎಂದು ತಿಳಿದು ಬಂದಿದೆ.

ಕಳೆದ ವರ್ಷ ಬಂದಿದ್ದ ಪ್ರವಾಹದಿಂದಾಗಿ ಬೆಳೆದ ಬೆಳೆ ನಾಶವಾಗಿ ಹೋಗಿತ್ತು. ಸಾಲವನ್ನೂ ತೀರಿಸಲಾಗದೆ ಮನನೊಂದಿದ್ದರು. ಮನೆಯಲ್ಲಿ ಯಾರು ಇಲ್ಲದ ಸಮಯವನ್ನು ನೋಡಿಕೊಂಡು ಕ್ರಿಮಿನಾಶಕ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಸಂಬಂಧ ಬಾದಾಮಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News