ಕೊರೋನ ನಡುವೆಯೂ ಎಸೆಸೆಲ್ಸಿ ಪರೀಕ್ಷೆ: ಸಚಿವ ಸುರೇಶ್ ಕುಮಾರ್ ವಿರುದ್ಧ ದೂರು

Update: 2020-06-20 11:44 GMT

ಬೆಂಗಳೂರು, ಜೂ.19: ಕೋವಿಡ್-19 ನಡುವೆಯೂ ಎಸೆಸೆಲ್ಸಿ ಪರೀಕ್ಷೆ ನಡೆಸಲು ಮುಂದಾಗಿರುವ ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಅವರ ವಿರುದ್ಧ ಇಲ್ಲಿನ ಹಲಸೂರು ಗೇಟ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ ಎಂದು ವರದಿಯಾಗಿದೆ.

ರಾಜ್ಯದಲ್ಲಿ ದಿನೇ ದಿನೇ ಕೊರೋನ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿರುವ ನಡುವೆಯೂ ಶಿಕ್ಷಣ ಸಚಿವರು ಎಸೆಸೆಲ್ಸಿ ಪರೀಕ್ಷೆ ನಡೆಸುವುದು ವಿದ್ಯಾರ್ಥಿಗಳ ಜೀವಕ್ಕೆ ಕಂಟಕ ಎಂದು ಆರೋಪಿಸಿ ಜನಾಧಿಕಾರ ಸಂಘರ್ಷ ಪರಿಷತ್ ದೂರು ಸಲ್ಲಿಸಿದೆ.

ಕರ್ನಾಟಕ ಶಿಕ್ಷಣ ಕಾಯ್ದೆ 22ನೇ ಸೆಕ್ಷನ್ ಪ್ರಕಾರ ಇಂಟರ್ನಲ್ ಅಸೆಸ್‍ಮೆಂಟ್ ಮಾರ್ಕ್ ನೋಡಿ ವಿದ್ಯಾರ್ಥಿಗಳನ್ನು ಪಾಸ್ ಮಾಡಬಹುದು ಅನ್ನುವ ಕಾನೂನಿದೆ. ಮಾಡೆಲ್ ಮಾಡುತ್ತೇವೆ ಎಂದು ಆ ಕಾನೂನನ್ನು ಬದಿಗಿಟ್ಟು ಮಕ್ಕಳ ಬದುಕನ್ನು ಅಪಾಯಕ್ಕೆ ತಳ್ಳುವುದು ಸರಿಯಲ್ಲ ಎಂದು ಪರಿಷತ್ತಿನ ಮುಖ್ಯಸ್ಥ ಆದರ್ಶ ಅಯ್ಯರ್ ಹೇಳಿದ್ದಾರೆ.

ಎಸೆಸೆಲ್ಸಿ ಪರೀಕ್ಷೆ  ನಡೆಸುತ್ತಿರುವುದರಿಂದ ಸಚಿವರ ವಿರುದ್ಧ ಐಪಿಸಿ ಸೆಕ್ಷನ್ 107, 304( ಉದ್ದೇಶಿತವಲ್ಲದ ಕೊಲೆ) ಪ್ರಕರಣ ದಾಖಲಿಸಬೇಕೆಂದು ಅವರು ದೂರಿನಲ್ಲಿ ಒತ್ತಾಯಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News