ಭಟ್ಕಳ: ಹೊಳೆಗೆ ಹಾರಿ ಆತ್ಮಹತ್ಯೆಗೆ ಶರಣಾದ ಮಹಿಳೆ; ಪತಿ ಪೊಲೀಸ್ ವಶಕ್ಕೆ

Update: 2020-06-20 16:24 GMT

ಭಟ್ಕಳ, ಜೂ.20: ಮಹಿಳೆಯೊಬ್ಬರು ಹೊಳೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಗರ ಪೊಲೀಸ್‌ಠಾಣಾ ವ್ಯಾಪ್ತಿಯ ಚೌತನಿ ಹೊಳೆಯಲ್ಲಿ ಶನಿವಾರ ನಡೆದಿದೆ. ಆತ್ಮಹತ್ಯೆಗೆ ಶರಣಾಗಿರುವ ಮಹಿಳೆಯನ್ನು ಮುಗ್ಲಿಹೊಂಡ ನಿವಾಸಿ ಝುಲೇಖ (55) ಎಂದು ಗುರುತಿಲಾಗಿದೆ.

ಮಹಿಳೆಗೆ ಕಿರುಕುಳ ನೀಡಿದ ಆರೋಪದಲ್ಲಿ ಆಕೆಯ ಪತಿ ಶಫೀ ಬಿಗಡಿ ಎಂಬವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ ಎಂದು ತಿಳಿದು ಬಂದಿದೆ.

ಸಮಾರಂಭಗಳಲ್ಲಿ ಮನೆಗಳಲ್ಲಿ ಕೆಲಸ ಮಾಡಿಕೊಂಡಿದ್ದ ಝುಲೇಖಾ ಅವರಿಗೆ ಕಿರುಕುಳ ನೀಡುತ್ತಿದ್ದರು ಎನ್ನಲಾಗಿದೆ ಎಇದರಿಂದ ಮನನೊಂದ ಅವರು ಚೌತನಿ ಹೊಳೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.

ಪತ್ನಿಗೆ ಕಿರುಕಿಳ ನೀಡಿ ಆತ್ಮ ಹತ್ಯೆಗೆ ಪ್ರಚೋದನೆ ನೀಡಿದ ಆರೋಪದಲ್ಲಿ ಪತಿ ಶಫೀ ಅವರನ್ನು ಪೊಲೀಸರು ವಶಕ್ಕೆ ಪಡೆದಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News