ಶಾರ್ಜಾ: ರವಿವಾರ ಕೆಎಸ್‌ಸಿಸಿಯಿಂದ ಖಾಸಗಿ ವಿಮಾನ ಮಂಗಳೂರಿಗೆ

Update: 2020-06-20 17:39 GMT

ಮಂಗಳೂರು, ಜೂ.20: ಲಾಕ್‌ಡೌನ್‌ನಿಂದ ಯುಎಇಯಲ್ಲಿ ಸಂಕಷ್ಟಕ್ಕೆ ಸಿಲುಕಿರುವ ಅನಿವಾಸಿ ಕನ್ನಡಿಗರಿಗಾಗಿ ಕರ್ನಾಟಕ ಸ್ಪೋರ್ಟ್ಸ್ ಕಲ್ಚರಲ್ ಕ್ಲಬ್(ಕೆಎಸ್‌ಸಿಸಿ) ಕಲ್ಪಿಸಿರುವ ಮೊದಲ ಚಾರ್ಟೆಡ್ ವಿಮಾನವು ಜೂ.21ರಂದು ಮಂಗಳೂರಿಗೆ ಆಗಮಿಸಲಿದೆ.

ಜೂ.21ರಂದು ಶಾರ್ಜಾ ಅಂತರ್‌ರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಹೊರಡುವ ಈ ಏರ್ ಅರೇಬಿಯಾ ಸಂಸ್ಥೆಯ ವಿಮಾನವು 173 ಅನಿವಾಸಿ ಕನ್ನಡಿಗರನ್ನು ಮರಳಿ ತಾಯ್ನಾಡಿಗೆ ಹೊತ್ತು ತರಲಿದೆ. ಆದ್ಯತೆಯ ಮೇರೆಗೆ ಗರ್ಭಿಣಿಯರಿಗೆ, ತುರ್ತು ಚಿಕಿತ್ಸಾ ರೋಗಿಗಳಿಗೆ, ಹಿರಿಯ ನಾಗರಿಕರಿಗೆ, ವಿಸಿಟ್ ವೀಸಾದಲ್ಲಿ ಬಂದು ಸಿಲುಕಿಕೊಂಡವರಿಗೆ, ಕೆಲಸ ಕಳೆದುಕೊಂಡವರಿಗೆ ಹಾಗೂ ತಾಯ್ನಾಡಿನಲ್ಲಿ ಮರಣ ಹೊಂದಿದ ವ್ಯಕ್ತಿಯ ಸಂಬಂಧಿಕರಿಗೆ ಅವಕಾಶ ಕಲ್ಪಿಸಲಾಗಿದೆ ಎಂದು ಪ್ರಕಟನೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News