ಅರಣ್ಯ ಪ್ರದೇಶದಲ್ಲಿ ಯುವಕನ ಶವ ಪತ್ತೆ: ಹುಲಿ ದಾಳಿಯಿಂದ ಮೃತಪಟ್ಟಿರುವ ಶಂಕೆ

Update: 2020-06-20 18:27 GMT

ಗುಂಡ್ಲುಪೇಟೆ, ಜೂ,20: ಬಂಡೀಪುರದಿಂದ ಕೇವಲ 4 ಕಿ.ಮೀ ದೂರದಲ್ಲಿರುವ ಕೇರಳದ ವಯನಾಡು ಜಿಲ್ಲೆಯ ಅರಣ್ಯ ಪ್ರದೇಶದಲ್ಲಿ ಯುವಕನೊಬ್ಬನ ಮೃತದೇಹ ಪತ್ತೆಯಾಗಿದ್ದು, ಇವರು ಹುಲಿ ದಾಳಿಯಿಂದ ಮೃತಪಟ್ಟಿರಬಹುದು ಎಂದು ಶಂಕಿಸಲಾಗಿದೆ.

ಕೇರಳದ ವಯನಾಡು ಜಿಲ್ಲೆಯ ಪುಲ್‍ಪಳ್ಳಿ ನಿವಾಸಿ ಶಿವಕುಮಾರ್ (23) ಮೃತ ಯುವಕ. ಕಟ್ಟಿಗೆ ಸಂಗ್ರಹಿಸಲು ಮಂಗಳವಾರ ಕಾಡಿಗೆ ತೆರಳಿದ್ದರು. ಇವರು ರಾತ್ರಿಯಾದರೂ ಮರಳದ ಹಿನ್ನೆಲೆಯಲ್ಲಿ, ಸ್ಥಳೀಯರು ಹಾಗೂ ಅರಣ್ಯ ಇಲಾಖೆಯ ಅಧಿಕಾರಿಗಳು ಕಾಡಿನಲ್ಲಿ ಹುಡುಕಾಟ ನಡೆಸಿದಾಗ ಶಿವಕುಮಾರ್ ಅವರ ಮೃತ ದೇಹ ಪತ್ತೆಯಾಗಿದೆ.

ಹುಲಿ ದಾಳಿಯಿಂದ ಅಥವಾ ಬೇರೆ ಯಾವ ಕಾರಣದಿಂದ ಸಾವನ್ನಪ್ಪಿದ ಎಂಬ ಬಗ್ಗೆ ತನಿಖೆ ನಡೆಯುತ್ತಿದೆ ಎಂದು ಬಂಡೀಪುರ ಹುಲಿ ಯೋಜನೆ ನಿರ್ದೇಶಕ ಟಿ ಬಾಲಚಂದ್ರ ತಿಳಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News