​ಯುವ ಕಾಂಗ್ರೆಸ್‌ನಿಂದ ಕೈಗಾಡಿ ಹಸ್ತಾಂತರ

Update: 2020-06-21 12:20 GMT

ಮಂಗಳೂರು, ಜೂ.21: ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯ ಹುಟ್ಟು ಹಬ್ಬದ ಪ್ರಯುಕ್ತ ದ.ಕ. ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಮಿಥುನ್ ರೈಯ ನೇತೃತ್ವದಲ್ಲಿ ಕಣ್ಣು ಕಾಣದೆ ಕೆಲಸ ಮಾಡಲು ಕಷ್ಟ ಪಡುತ್ತಿದದ್ದ ವ್ಯಕ್ತಿಯೊಬ್ಬರಿಗೆ ಬದುಕು ಸಾಗಿಸಲು ಕೈಗಾಡಿ ಮತ್ತು 100 ಎಳನೀರನ್ನು ನಗರದ ಮಲ್ಲಿಕಟ್ಟೆಯ ಜಿಲ್ಲಾ ಕಾಂಗ್ರೆಸ್ ಕಚೇರಿಯ ಮುಂದೆ ಶನಿವಾರ ವಿತರಿಸಲಾಯಿತು.

ಈ ಸಂದರ್ಭ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹರೀಶ್ ಕುಮಾರ್, ರಾಜ್ಯ ಉಪಾಧ್ಯಕ್ಷ ಕೆಂಪರಾಜ್ ಗೌಡ, ಪ್ರಧಾನ ಕಾರ್ಯದರ್ಶಿ ಸುಹೈಲ್ ಕಂದಕ್ ಮತ್ತಿತರರು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News