ಮಹಿಳೆಯೊಂದಿಗೆ ಅಸಭ್ಯ ವರ್ತನೆ ಆರೋಪ: ಓರ್ವನ ಸೆರೆ

Update: 2020-06-22 12:32 GMT

ಬೆಂಗಳೂರು, ಜೂ.22: ರಸ್ತೆಯಲ್ಲಿ ನಡೆದು ಹೋಗುತ್ತಿದ್ದ ಮಹಿಳೆಯೊಂದಿಗೆ ಅನುಚಿತವಾಗಿ ವರ್ತಿಸಿದ ಆರೋಪದ ಮೇರೆಗೆ ವ್ಯಕ್ತಿಯೋರ್ವನನ್ನು ಆರ್ ಟಿನಗರ ಠಾಣಾ ಪೊಲೀಸರು ಬಂಧಿಸಿದ್ದಾರೆ.

ಗಂಗಾನಗರದ ಲಕ್ಷ್ಮಯ್ಯ ಬ್ಲಾಕ್ ನಿವಾಸಿ ಸಂತೋಷ್ ಬಂಧಿತ ಆರೋಪಿ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಜೂ.20ರಂದು ಮಧ್ಯಾಹ್ನ ಗಿಡ್ಡಪ್ಪ ಬ್ಲಾಕ್ ರಸ್ತೆಯಲ್ಲಿ 40 ವರ್ಷದ ಮಹಿಳೆ ಮನೆಗೆ ದಿನಸಿ ತರಲು ನಡೆದು ಹೋಗುತ್ತಿದ್ದಾಗ ದ್ವಿಚಕ್ರ ವಾಹನದಲ್ಲಿ ಬಂದ ಸಂತೋಷ್ ಈಕೆಯೊಂದಿಗೆ ಅಸಭ್ಯವಾಗಿ ವರ್ತಿಸಿ ಪರಾರಿಯಾಗಿದ್ದ ಎನ್ನಲಾಗಿದೆ.

ಈ ಬಗ್ಗೆ ಆರ್‍ಟಿನಗರ ಪೊಲೀಸ್ ಠಾಣೆಗೆ ಮಹಿಳೆ ದೂರು ನೀಡಿದ್ದರು. ಪ್ರಕರಣ ದಾಖಲಿಸಿಕೊಂಡಿದ್ದ ಪೊಲೀಸರು ಘಟನಾ ಸ್ಥಳದಲ್ಲಿನ ಸಿಸಿಟಿವಿ ದೃಶ್ಯಾವಳಿಯನ್ನು ಆಧರಿಸಿ ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News