ಬಾವಿಯಲ್ಲಿ ಮೃತದೇಹ ಪತ್ತೆ

Update: 2020-06-22 15:37 GMT

ಮಲ್ಪೆ, ಜೂ.22: ಕೆರ್ಳಾಕಳಬೆಟ್ಟು ಗ್ರಾಮದ ಶ್ರೀನಗರ ಎಂಬಲ್ಲಿರುವ ಬಾವಿಯಲ್ಲಿ 45- 50 ವರ್ಷ ವಯಸ್ಸಿನ ಅಪರಿಚಿತ ಗಂಡಸಿನ ಮೃತದೇಹವು ಕೊಳೆತ ಸ್ಥಿತಿಯಲ್ಲಿ ಜೂ.21ರಂದು ಸಂಜೆ ವೇಳೆ ಪತ್ತೆಯಾಗಿದೆ.

ಮೃತ ವ್ಯಕ್ತಿಯು ಮೂರು ನಾಲ್ಕು ದಿನಗಳ ಹಿಂದೆ ಆಕಸ್ಮಿಕವಾಗಿ ಅಥವಾ ಬೇರೆ ರಿತೀಯಲ್ಲಿ ಬಾವಿಗೆ ಬಿದ್ದು ಮೃತಪಟ್ಟಿರಬಹುದು ಎಂದು ಶಂಕಿಸ ಲಾಗಿದೆ. ಈ ಬಗ್ಗೆ ಮಲ್ಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News