×
Ad

ಭಾಗಮಂಡಲದ ತ್ರಿವೇಣಿ ಸಂಗಮದಲ್ಲಿ ಮುಳುಗಿ ಯುವಕ ಮೃತ್ಯು

Update: 2020-06-23 16:42 IST

ಮಡಿಕೇರಿ  : ಪೂಜೆ ಮಾಡಲೆಂದು ಹುಣಸೂರಿನಿಂದ ಭಾಗಮಂಡಲಕ್ಕೆ ಬಂದಿದ್ದ ವ್ಯಕ್ತಿಯೊರ್ವರು ನೀರಿನಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ಭಾಗಮಂಡಲದ ತ್ರಿವೇಣಿ ಸಂಗಮದಲ್ಲಿ ನಡೆದಿದೆ.

ಸುಬ್ರಮಣಿ (31) ಎಂಬವರು ನೀರಿನಲ್ಲಿ ಮುಳುಗಿ ಸಾವನ್ನಪ್ಪಿದವರು. ಹುಣಸೂರಿನಿಂದ  ಬಂದಿದ್ದ  ಕುಟುಂಬವೊಂದು ನೀರಿಗೆ ಇಳಿದಿದ್ದಾಗ    ಮಣಿಕಂಠ ಎಂಬಾತ ಮುಳುಗತೊಡಗಿದ್ದು, ಆತನನ್ನು ಮೇಲೆತ್ತಲು ಹೋದ ಸಹೋದರ ಸುಬ್ರಮಣಿ ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾರೆ.  ಜೊತೆಯಲ್ಲಿದ್ದ ಪ್ರಮೀಳಾ ಮತ್ತು ಯಶೋದಾ ಕೂಡ ನೀರಲ್ಲಿ ಮುಳುಗಿದ್ದರು. ಕೂಡಲೇ ನೆರವಿಗಾಗಿ ಬೊಬ್ಬೆ ಹೊಡೆದಾಗ  ಸ್ಥಳೀಯರಾದ ಗೋಪಾಲ್ ಎಂಬುವರರು ಮಹಿಳೆಯರನ್ನು ರಕ್ಷಿಸಿದರೂ ಸುಬ್ರಮಣಿ ನೀರಿನಲ್ಲಿ ಮುಳುಗಿ ಮೃತಪಟ್ಟರು ಎಂದು ತಿಳಿದುಬಂದಿದೆ.

ಮೃತ ಸುಬ್ರಮಣಿ ಮತ್ತು ಮಣಿಕಂಠ ಇಬ್ಬರೂ ಕಾರು ಮೆಕ್ಯಾನಿಕ್‍ಗಳಾಗಿ ಹುಣಸೂರಿನಲ್ಲಿ  ಕೆಲಸ ಮಾಡುತ್ತಿದ್ದರು. ಮೃತರು ಪತ್ನಿ ಹಾಗೂ ಓರ್ವ ಪುತ್ರಿಯನ್ನು ಅಗಲಿದ್ದಾರೆ. ಗಾಯಾಳು ಮಹಿಳೆಯರನ್ನು ಮಡಿಕೇರಿ  ಜಿಲ್ಲಾ ಆಸ್ಪತ್ರೆಗೆ ದಾಖಲು  ಮಾಡಲಾಗಿದೆ.  ಭಾಗಮಂಡಲ ಪೊಲೀಸರು  ಮೊಕದ್ದಮೆ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News