ಕಾರು ಢಿಕ್ಕಿ: ರಸ್ತೆ ದಾಟಲು ನಿಂತಿದ್ದ ಮಹಿಳೆ ಮೃತ್ಯು

Update: 2020-06-23 15:42 GMT

ಮಣಿಪಾಲ, ಜೂ. 23: ಕಾರೊಂದು ಢಿಕ್ಕಿ ಹೊಡೆದ ಪರಿಣಾಮ ರಸ್ತೆ ದಾಟಲು ನಿಂತಿದ್ದ ಮಹಿಳೆಯೊಬ್ಬರು ಮೃತಪಟ್ಟ ಘಟನೆ ಜೂ.23ರಂದು ಬೆಳಗ್ಗೆ 8:30ರ ಸುಮಾರಿಗೆ ಮಣಿಪಾಲ ಕೆಎಂಸಿ ಆಸ್ಪತ್ರೆಯ ತುರ್ತು ಚಿಕಿತ್ಸಾ ವಿಭಾಗದ ಎದುರು ರಾಷ್ಟ್ರೀಯ ಹೆದ್ದಾರಿ 168(ಎ)ರಲ್ಲಿ ನಡೆದಿದೆ.

ಮೃತರನ್ನು ಸರಳೇಬೆಟ್ಟು ನಿವಾಸಿ ಪದ್ಮಾ(37) ಎಂದು ಗುರುತಿಸಲಾಗಿದೆ.

ಉಡುಪಿ ಕಡೆಯಿಂದ ಪರ್ಕಳ ಕಡೆಗೆ ಹೋಗುತ್ತಿದ್ದ ಕಾರು ರಸ್ತೆಯನ್ನು ದಾಟಲು ರಸ್ತೆಯ ಬದಿಯಲ್ಲಿ ನಿಂತಿದ್ದ ಪದ್ಮಾ ಅವರಿಗೆ ಡಿಕ್ಕಿ ಹೊಡೆಯಿತ್ತೆನ್ನ ಲಾಗಿದೆ. ಇದರಿಂದ ಗಂಭೀರವಾಗಿ ಗಾಯಗೊಂಡ ಅವರು, ಮಣಿಪಾಲ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ಸ್ವಂದಿಸದೆ ಮೃತಪಟ್ಟರು.

ಸರಳೇಬೆಟ್ಟಿನ ಸರ್ಕಲ್ ಬಳಿ ಬಾಡಿಗೆ ಮನೆಯಲ್ಲಿ ವಾಸವಾಗಿರುವ ಇವರು, ಮಣಿಪಾಲದ ಗಾರ್ಮೆಂಟ್‌ನಲ್ಲಿ ಕೆಲಸ ಮಾಡುತ್ತಿದ್ದರು. ಇವರು ಪತಿ, ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ. ಈ ಬಗ್ಗೆ ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News