ಜೂ.25ಕ್ಕೆ ಸಚಿವ ಸಂಪುಟ ಸಭೆ

Update: 2020-06-23 16:38 GMT

ಬೆಂಗಳೂರು, ಜೂ. 23: ರಾಜ್ಯದಲ್ಲಿ ಮಾರಕ ಕೊರೋನ ವೈರಸ್ ಸೋಂಕು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಸೋಂಕು ನಿಯಂತ್ರಣ, ಮತ್ತೊಮ್ಮೆ 'ಲಾಕ್‍ಡೌನ್' ಇನ್ನಿತರ ಮಹತ್ವದ ವಿಚಾರಗಳ ಬಗ್ಗೆ ಚರ್ಚೆಗೆ ಜೂ.25ರಂದು ಬೆಳಗ್ಗೆ 11 ಗಂಟೆಗೆ ಸಚಿವ ಸಂಪುಟ ಸಭೆ ಕರೆಯಲಾಗಿದೆ.

ವಿಧಾನಸೌಧದ ಮೂರನೆ ಮಹಡಿಯಲ್ಲಿನ ಸಮ್ಮೇಳನ ಸಭಾಂಗಣದಲ್ಲಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪನವರ ಅಧ್ಯಕ್ಷತೆಯಲ್ಲಿ ನಡೆಯಲಿರುವ ಸಚಿವ ಸಂಪುಟ ಸಭೆಯಲ್ಲಿ ಸಂಪುಟದ ಸಹೋದ್ಯೋಗಿಗಳು ಪಾಲ್ಗೊಳ್ಳಲಿದ್ದಾರೆ. ಜೂ.25ಕ್ಕೆ ಎಸೆಸೆಲ್ಸಿ ಪರೀಕ್ಷೆಯೂ ನಡೆಯಲಿದ್ದು, ಅದರ ಸಾಧಕ-ಬಾಧಕಗಳ ಬಗ್ಗೆಯೂ ಸಮಾಲೋಚನೆ ನಡೆಸಲಿದ್ದಾರೆಂದು ಗೊತ್ತಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News