ನೇಣು ಬಿಗಿದು ಪೊಲೀಸ್ ಹೆಡ್ ಕಾನ್‍ಸ್ಟೇಬಲ್ ಆತ್ಮಹತ್ಯೆ

Update: 2020-06-25 15:31 GMT

ಬೆಂಗಳೂರು, ಜೂ.25: ಕೌಟುಂಬಿಕ ಕಲಹ ಹಿನ್ನೆಲೆ ಹೆಡ್ ಕಾನ್‍ಸ್ಟೇಬಲ್ ಓರ್ವರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಇಲ್ಲಿನ ಯಲಹಂಕ ಉಪನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ ಎಂದು ವರದಿಯಾಗಿದೆ.

ಚನ್ನಪಟ್ಟಣ ಮೂಲದ ಗುರುಪ್ರಸಾದ್(38) ಆತ್ಮಹತ್ಯೆಗೆ ಶರಣಾದ ಹೆಡ್ ಕಾನ್‍ಸ್ಟೇಬಲ್ ಆಗಿದ್ದು, ಇವರು ನಗರದ ಸಂಪಿಗೆಹಳ್ಳಿ ಪೊಲೀಸ್ ಠಾಣೆಯಲ್ಲಿ ನಾಲ್ಕು ವರ್ಷಗಳಿಂದ ಸೇವೆ ಸಲ್ಲಿಸುತ್ತಿದ್ದರು ಎನ್ನಲಾಗಿದೆ.

ಯಲಹಂಕ ಉಪನಗರ ಪೊಲೀಸ್ ಠಾಣಾ ವ್ಯಾಪ್ತಿಯ ಪೊಲೀಸ್ ವಸತಿ ಗೃಹದಲ್ಲಿ ಕುಟುಂಬ ಸಮೇತ ವಾಸವಿದ್ದರು. ಇತ್ತೀಚಿಗೆ ಕೌಟುಂಬಿಕ ವಿಚಾರವಾಗಿ ಪತ್ನಿಯೊಂದಿಗೆ ಜಗಳವಾಡಿದ್ದರು ಎನ್ನಲಾಗಿದೆ. ಇದಾದ ನಂತರ ಆಕೆ ಮನೆ ಬಿಟ್ಟು ಊರು ಸೇರಿದ್ದರು. ಇದರಿಂದ ನೊಂದು ಪೊಲೀಸ್ ವಸತಿ ಗೃಹದಲ್ಲಿಯೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಹೇಳಲಾಗುತ್ತಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News