ಬಂಟ್ವಾಳ: ಎಸ್ ಡಿ ಪಿ ಐ ಪ್ರತಿಭಟನೆ

Update: 2020-06-25 17:22 GMT

ಬಂಟ್ವಾಳ, ಜೂ. 25: ಸೋಶಿಯಲ್ ಡೆಮೊಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಬಂಟ್ವಾಳ ವಿಧಾನ ಸಭಾ ಕ್ಷೆತ್ರ ಸಮಿತಿ ವತಿಯಿಂದ ಕೇಂದ್ರ ಮತ್ತು ರಾಜ್ಯ ಸರಕಾರದ ನೀತಿ ವಿರುದ್ಧ ಪ್ರತಿಭಟನೆ ನಡೆಯಿತು. ಪ್ರತಿಭಟನೆಯನ್ನು ಉದ್ದೇಶಿಸಿ ರಾಜ್ಯ ಸಮಿತಿ ಸದಸ್ಯ ರಿಯಾಝ್ ಫರಂಗಿಪೇಟೆ ಮಾತನಾಡಿ, ಕೊರೋನ ವಿಚಾರದಲ್ಲಿ ರಾಜಕೀಯ ಮಾಡುವುದು ಶೋಭೆ ತರುವ ವಿಚಾರವಲ್ಲ ಎಂದು ಅಭಿಪ್ರಾಯ ಪಟ್ಟರು.

ಜಿಲ್ಲಾ ಪ್ರಧಾನ ಕಾರ್ಯದರ್ಶಿ ಶಾಹುಲ್ ಎಸ್ ಎಚ್, ಬಂಟ್ವಾಳ ಕ್ಷೇತ್ರ ಅಧ್ಯಕ್ಷರಾದ ಯೂಸುಫ್ ಆಲಡ್ಕ ಮಾತನಾಡಿದರು. ಬಂಟ್ವಾಳ ಪುರಸಭಾ ಸದಸ್ಯರಾದ ಮುನೀಶ್ ಅಲಿ, ಕ್ಷೇತ್ರ ಸಮಿತಿ ಉಪಾಧ್ಯಕ್ಷರಾದ ಉಬೈದ್ ಬಂಟ್ವಾಳ, ಸದಸ್ಯರಾದ ಸಲೀಂ ಅಲಾಡಿ, ರವೂಫ್ ಕಲಾಯಿ ಉಪಸ್ಥಿತ ರಿದ್ದರು  ಕ್ಷೇತ್ರ ಸಮಿತಿ ಕಾರ್ಯದರ್ಶಿ ಖಲಂದರ್ ಪರ್ತಿಪಾಡಿ ಸ್ವಾಗತಿಸಿ ವಂದಿಸಿದರು. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News