ಕೊರೋನ ಸೋಂಕಿತರಿಗೆ ಉಚಿತ ಚಿಕಿತ್ಸೆ ನೀಡುವಂತೆ ಒತ್ತಾಯಿಸಿ ಡಿವೈಎಫ್ಐ ಪ್ರತಿಭಟನೆ

Update: 2020-06-26 04:47 GMT

ತೊಕ್ಕೊಟ್ಟು, ಜೂ. 26: ಖಾಸಗಿ ಆಸ್ಪತ್ರೆಗಳಲ್ಲಿ ಕೊರೋನ ಸೋಂಕಿತರ ಚಿಕಿತ್ಸೆಗೆ ರಾಜ್ಯ ಸರಕಾರ ದರ ನಿಗದಿ ಮಾಡಿರುವುದನ್ನು ವಿರೋಧಿಸಿ, ಸೋಂಕಿತರಿಗೆ ಕಡ್ಡಾಯವಾಗಿ ಉಚಿತ ಚಿಕಿತ್ಸೆ ನೀಡಬೇಕು ಎಂದು ಒತ್ತಾಯಿಸಿ ಡಿವೈಎಫ್ಐ ಉಳ್ಳಾಲ ವಲಯ ಸಮಿತಿ ವತಿಯಿಂದ ತೊಕ್ಕೊಟ್ಟು ನಾಡ ಕಚೇರಿ ಮುಂಭಾಗ ಭಿತ್ತಿಪತ್ರ ಪ್ರದರ್ಶನ ನಡೆಸಿ ಅಧಿಕಾರಿಗಳ ಮುಖಾಂತರ ರಾಜ್ಯದ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಲಾಯಿತು.

ಸಭೆಯಲ್ಲಿ ಡಿವೈಎಫ್ಐ ವಲಯ ಸಮಿತಿ ಅಧ್ಯಕ್ಷ ಅಶ್ರಫ್ ಕೆಸಿ ರೋಡ್, ಡಿವೈಎಫ್ಐ ಜಿಲ್ಲಾ ನಾಯಕರಾದ ಜೀವನ್ ರಾಜ್ ಕುತ್ತಾರ್, ರಫೀಕ್ ಹರೇಕಳ, ಸಿಪಿಐಎಂ ಮುಖಂಡ ಮಹಾಬಲ ದೆಪ್ಪಲಿಮಾರ್, ವಲಯ ಕಾರ್ಯದರ್ಶಿ ಸುನಿಲ್ ತೇವುಲ, ಉಪಾಧ್ಯಕ್ಷ ರಝಾಕ್ ಮೊಂಟೆಪದವು, ಡಿವೈಎಫ್ಐ ಮುಡಿಪು ಘಟಕದ ಅಧ್ಯಕ್ಷ ರಝಾಕ್ ಮುಡಿಪು, ಪ್ರಜ್ಞೆಶ್ ಚೆಂಬುಗುಡ್ಡೆ, ಕಿರಣ್ ಅಂಬ್ಲಮೊಗರು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News