ಕೆರೆಗೆ ಹಾರಿ ಆತ್ಮಹತ್ಯೆ
Update: 2020-06-26 16:17 GMT
ಪಡುಬಿದ್ರಿ, ಜೂ.26: ಮಾನಸಿಕ ಕಾಯಿಲೆಯಿಂದ ಬಳಲುತಿದ್ದ ರಘು ಆಂಚನ್ ಎಂಬವರು ಬಡಾ ಎರ್ಮಾಳ್ ಗ್ರಾಮದ ವಿಜಯಕುಮಾರ್ ಎಂಬವರ ಮನೆಯ ಪಕ್ಕದ ಕೆರೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆನ್ನಲಾಗಿದ್ದು, ಇಂದು ಬೆಳಗ್ಗೆ ಅವರ ಮೃತದೇಹ ಕೆರೆಯಲ್ಲಿ ಪತ್ತೆಯಾಗಿದೆ.
ಅವರು ಜೂ.24ರ ರಾತ್ರಿ ಮನೆಯಿಂದ ನಾಪತ್ತೆಯಾಗಿದ್ದರು. ಜೀವನದಲ್ಲಿ ಜಿಗುಪ್ಸೆಗೊಂಡ ಅವರು ಕೆರೆ ನೀರಿಗೆ ಬಿದ್ದು ಮೃತಪಟ್ಟಿರಬೇಕೆಂದು ಶಂಕಿಸಲಾಗಿದೆ.
ಈ ಬಗ್ಗೆ ಪಡುಬಿದ್ರೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.