ಮಂಗಳೂರು ಪೊಲೀಸ್ ಆಯುಕ್ತ ಡಾ. ಹರ್ಷ ವರ್ಗಾವಣೆ: ನೂತನ ಆಯುಕ್ತರಾಗಿ ವಿಕಾಸ್ ಕುಮಾರ್ ನೇಮಕ
Update: 2020-06-26 18:08 GMT
ಮಂಗಳೂರು, ಜೂ. 26: ಮಂಗಳೂರು ನಗರ ಪೊಲೀಸ್ ಆಯುಕ್ತಾಲಯದ ಪೊಲೀಸ್ ಆಯುಕ್ತ ಡಾ. ಪಿ.ಎಸ್. ಹರ್ಷ ಅವರು ವರ್ಗಾವಣೆಗೊಂಡಿದ್ದು, ತೆರವಾದ ಸ್ಥಾನಕ್ಕೆ ವಿಕಾಸ್ ಕುಮಾರ್ ಅವರನ್ನು ನೇಮಕಗೊಳಿಸಿ ರಾಜ್ಯ ಸರಕಾರ ಶುಕ್ರವಾರ ಆದೇಶ ಹೊರಡಿಸಿದೆ.
ಡಾ. ಹರ್ಷ ಅವರನ್ನು ಬೆಂಗಳೂರಿನ ಮಾಹಿತಿ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಡೆಪ್ಯೂಟಿ ಇನ್ಸ್ಪೆಕ್ಟರ್ ಜನರಲ್ ಆ್ಯಂಡ್ ಕಮಿಷನರ್ ಆಗಿ ವರ್ಗಾವಣೆ ಮಾಡಲಾಗಿದೆ.
ನಕ್ಸಲ್ ನಿಗ್ರಹ ಪಡೆಯ ಆಯುಕ್ತರಾಗಿದ್ದ ವಿಕಾಸ್ ಕುಮಾರ್ ಅವರನ್ನು ಮಂಗಳೂರು ಪೊಲೀಸ್ ಆಯುಕ್ತರನ್ನಾಗಿ ನೇಮಕ ಮಾಡಲಾಗಿದ್ದು, ತಕ್ಷಣದಿಂದಲೇ ಜಾರಿ ಬರುವಂತೆ ಆದೇಶ ಹೊರಡಿಸಲಾಗಿದೆ.