ನಿಯಂತ್ರಣ ತಪ್ಪಿ ಲಾರಿಗೆ ಢಿಕ್ಕಿಯಾದ ಪೊಲೀಸ್ ವಾಹನ

Update: 2020-06-28 11:55 GMT

ಬೆಂಗಳೂರು, ಜೂ.28: ನಿಯಂತ್ರಣ ತಪ್ಪಿ ಪೊಲೀಸ್ ವಾಹನವೊಂದು ಲಾರಿಗೆ ಢಿಕ್ಕಿ ಹೊಡೆದಿರುವ ಘಟನೆ ರವಿವಾರ ನಗರದಲ್ಲಿ ಜರುಗಿದೆ.

ಇಲ್ಲಿನ ಮಾನ್ಯತಾ ಟೆಕ್‍ಪಾರ್ಕ್ ಬಳಿ ಈ ಘಟನೆ ನಡೆದಿದ್ದು, ಯಾವುದೇ ಪ್ರಾಣಾಪಾಯವಾಗಿಲ್ಲ ಎಂದು ತಿಳಿದುಬಂದಿದೆ.

ಹೊಸಕೋಟೆ ಠಾಣೆಯ ಪಿಎಸ್ಸೈ ಪೊಲೀಸ್ ವಾಹನದಲ್ಲಿದ್ದು, ಪ್ರಕರಣವೊಂದರ ನಿಮಿತ್ತ ಚಿಕ್ಕಜಾಲ ಮಾರ್ಗವಾಗಿ ಪ್ರಯಾಣ ಬೆಳೆಸಿದ್ದರು. ಈ ವೇಳೆ ಪೊಲೀಸ್ ವಾಹನ ನಿಯಂತ್ರಣ ತಪ್ಪಿ, ಲಾರಿಗೆ ಢಿಕ್ಕಿ ಹೊಡೆದು ಈ ಅವಘಡ ಸಂಭವಿಸಿದೆ ಎನ್ನಲಾಗಿದೆ.

ಸದ್ಯ ಘಟನೆಯಲ್ಲಿ ಯಾವುದೇ ಪ್ರಾಣಾಪಾಯವಾಗಿಲ್ಲ. ಸ್ಥಳಕ್ಕೆ ಚಿಕ್ಕಜಾಲ ಸಂಚಾರ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದರು. ಘಟನೆಯಲ್ಲಿ ಗಾಯಗೊಂಡ ಪಿಎಸ್ಸೈ ಅವರನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ ಎಂದು ತಿಳಿದುಬಂದಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News