​ಪ್ರತ್ಯೇಕ ಪ್ರಕರಣ: ಮೂವರ ಆತ್ಮಹತ್ಯೆ

Update: 2020-06-28 15:38 GMT

ಕಾರ್ಕಳ, ಜೂ.28: ವೈಯಕ್ತಿಕ ಕಾರಣದಿಂದ ಮಾನಸಿಕವಾಗಿ ನೊಂದ ನಿಟ್ಟೆ ಗ್ರಾಮದ ಮದನಾಡು ನಿವಾಸಿ ಜಯ ದೇವಾಡಿಗ(50) ಎಂಬವರು ಜೂ.27ರಂದು ರಾತ್ರಿ ವೇಳೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು  ಈ ಬಗ್ಗೆ ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕಾಪು: ಮದ್ಯ ಸೇವಿಸುವ ಚಟ ಹೊಂದಿದ್ದ ಅಚ್ಚಡ ರೈಲ್ವೇ ಗೇಟ್ ಬಳಿಯ ನಿವಾಸಿ ಪಿ.ಶೇಖರ್(57) ಎಂಬವರು ಜೀವನದಲ್ಲಿ ಜಿಗುಪ್ಸೆಗೊಂಡು ಜೂ.27ರಂದು ಮೂಡಬೆಟ್ಟು ಗ್ರಾಮದ ಗಾಂಧಿನಗರ ಸಾರ್ವಜನಿಕ ಹಿಂದೂ ರುದ್ರ ಭೂಮಿಯ ಚಿತಗಾರದ ಬಳಿ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಈ ಬಗ್ಗೆ ಕಾಪು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮಲ್ಪೆ:  ಮಾನಸಿಕ ಕಾಯಿಲೆಯಿಂದ ಬಳಲುತ್ತಿದ್ದ ತೆಂಕನಿಡಿಯೂರು ಕೆಳಾ ರ್ಕಳಬೆಟ್ಟುವಿನ ಮಿಥುನ್ (39) ಎಂಬವರು ಜೀವನದಲ್ಲಿ ಜಿಗುಪ್ಸೆಗೊಂಡು ಜೂ.26ರಿಂದ ಜೂ.28ರ ಮಧ್ಯಾವಧಿಯಲ್ಲಿ ಬಾವಿಗೆ ಹಾರಿ ಆತ್ಯಹತ್ಯೆ ಮಾಡಿಕೊಂಡಿದ್ದಾರೆ ಎಂದು ಈ ಬಗ್ಗೆ ಮಲ್ಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News