ಮಂಗಳೂರು: ಕಡಲಿಗೆ ಬಿದ್ದ ಪುತ್ತೂರಿನ ಯುವಕನನ್ನು ರಕ್ಷಿಸಿದ ಸ್ಥಳೀಯರು

Update: 2020-06-28 16:46 GMT

ಮಂಗಳೂರು, ಜೂ.28: ಸುರತ್ಕಲ್‌ನ ಗುಡ್ಡೆಕೊಪ್ಲ ಕಡಲ ಕಿನಾರೆಗೆ ಬಿದ್ದಿದ್ದ ಯುವಕನನ್ನು ಸ್ಥಳೀಯರು ರಕ್ಷಣೆ ಮಾಡಿದ ಘಟನೆ ರವಿವಾರ ಮಧ್ಯಾಹ್ನ ನಡೆದಿದೆ.

ಕೇರಳ ಮೂಲದ ಹಾಗೂ ಪುತ್ತೂರಿನಲ್ಲಿ ಕೆಲಸ ಮಾಡುತ್ತಿರುವ ಯುವಕನೋರ್ವ ವಿಹಾರಕ್ಕೆಂದು ಗುಡ್ಡೆಕೊಪ್ಲ ಕಡಲ ಕಿನಾರೆಗೆ ಬಂದಿದ್ದ. ಈತ ಸ್ಥಳೀಯ ಮೊಗವೀರರ ಎಚ್ಚರಿಕೆಗೂ ಗಮನ ಕೊಡದೆ ಕಡಲಲ್ಲಿ ಈಜುತ್ತಿರುವಾಗ ಕಡಲ ಅಬ್ಬರಕ್ಕೆ ಸಿಲುಕಿದ್ದ. ಯುವಕ ಮುಳುಗುತ್ತಿರುವಾಗ ಸ್ಥಳೀಯರು ನೋಡಿ ರಕ್ಷಣೆ ಮಾಡಿದ್ದಾರೆ.

ಕಡಲ ಮದ್ಯದಲ್ಲಿ ಮುಳುಗಿದ್ದ ಡ್ರಜ್ಜರ್ ಕಡೆಗೆ ಯುವಕನನ್ನು ಸಮುದ್ರದ ಅಲೆ ಎಳೆದುಕೊಂಡು ಹೋಗಿತ್ತು. ಈ ವೇಳೆ ಸಹಾಯಕ್ಕೆ ಅಂಗಲಾ ಚುತ್ತಿದ್ದ. ಈ ವೇಳೆ ಸ್ಥಳೀಯ ಮೊಗವೀರ ಯುವಕರಾದ ಯಾದವ ಶ್ರೀಯಾನ್ ಮತ್ತು ಸುಜಿತ್ ಈಜುತ್ತಾ ಡ್ರಜರ್ ಕಡೆಗೆ ತೆರಳಿ ಯುವಕನನ್ನು ಹಿಡಿದು ದಡಕ್ಕೆ ತಲುಪಿಸಿದ್ದಾರೆ. ಇವರ ಸಾಹಸಕ್ಕೆ ಸಾರ್ವಜನಿಕ ವಲಯದಲ್ಲಿ ವ್ಯಾಪಕ ಪ್ರಶಂಸೆ ವ್ಯಕ್ತವಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News