ಮಂಗಳೂರು ಪೊಲೀಸ್ ಆಯುಕ್ತರಾಗಿ ವಿಕಾಸ್ ಕುಮಾರ್ ಅಧಿಕಾರ ಸ್ವೀಕಾರ

Update: 2020-06-29 11:13 GMT

ಮಂಗಳೂರು, ಜೂ.29: ಮಂಗಳೂರು ನಗರ ನೂತನ ಪೊಲೀಸ್ ಆಯುಕ್ತರಾಗಿ ವಿಕಾಸ್ ಕುಮಾರ್ ಸೋಮವಾರ ಅಧಿಕಾರ ಸ್ವೀಕರಿಸಿದ್ದಾರೆ.
ಈಗಾಗಲೆ ವರ್ಗಾವಣೆಗೊಂಡಿರುವ ಪೊಲೀಸ್ ಆಯುಕ್ತ ಡಾ.ಪಿ.ಎಸ್.ಹರ್ಷ ಬೆಂಗಳೂರಿನ ಮಾಹಿತಿ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಡೆಪ್ಯುಟಿ ಇನ್‌ಸ್ಪೆಕ್ಟರ್ ಜನರಲ್ ಆ್ಯಂಡ್ ಕಮಿಷನರ್ ಆಗಿ ಅಧಿಕಾರ ಸ್ವೀಕರಿಸಿದ್ದಾರೆ.

ವಿಕಾಸ್ ಕುಮಾರ್ ಈ ಹಿಂದೆ ಚಿಕ್ಕಮಗಳೂರು ಎಸ್ಪಿಯಾಗಿ, ಆಂತರಿಕ ಭದ್ರತೆ ವಿಭಾಗ ಮತ್ತು ನಕ್ಸಲ್ ನಿಗ್ರಹ ಪಡೆಯ ಡಿಐಜಿಯಾಗಿ ಕರ್ತವ್ಯ ನಿರ್ವಹಿಸಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News