ಕೊರೋನ ಸೋಂಕಿತರಿಗೆ ಸೂಕ್ತ ಚಿಕಿತ್ಸೆಗೆ ಸರಕಾರ ಸಜ್ಜು: ಡಾ.ಕೆ.ಸುಧಾಕರ್

Update: 2020-06-29 14:49 GMT

ಬೆಂಗಳೂರು, ಜೂ.29: ನಗರದಲ್ಲಿ ದಿನದಿಂದ ದಿನಕ್ಕೆ ಹೆಚ್ಚುತ್ತಿರುವುದನ್ನು ಸರಕಾರ ಗಂಭೀರವಾಗಿ ಪರಿಗಣಿಸಿದ್ದು, ಸೋಂಕಿತರಿಗೆ ಸೂಕ್ತ ಚಿಕಿತ್ಸೆ ನೀಡಲು ರಾಜ್ಯ ಸರಕಾರ ಸಜ್ಜಾಗಿದೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಹೇಳಿದ್ದಾರೆ.

ಕಳೆದ ಎರಡು ದಿನಗಳಿಂದ ಗಣನೀಯವಾಗಿ ಸೋಂಕಿತರ ಸಂಖ್ಯೆ ಅಧಿಕಗೊಂಡಿದೆ. ಒಟ್ಟು ಸೋಂಕಿತರ ಪ್ರಮಾಣದ ಪೈಕಿ ಶೇ.25.92 ಪ್ರಕರಣಗಳು ಬೆಂಗಳೂರಿನಲ್ಲಿವೆ. ಈ ಹಿನ್ನೆಲೆಯಲ್ಲಿ ರಾಜ್ಯ ಸರಕಾರ ಇದನ್ನು ನಿಯಂತ್ರಣ ಮಾಡಲು ಬಿಗಿ ಕ್ರಮ ಕೈಗೊಳ್ಳಲಾಗಿದೆ ಎಂದು ಅವರು ಟ್ವಿಟರ್ ನಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News