ರಾಜ್ಯದಲ್ಲಿಂದು 1,105 ಮಂದಿಗೆ ಕೊರೋನ ಪಾಸಿಟಿವ್: ಸೋಂಕಿಗೆ ಮತ್ತೆ 19 ಮಂದಿ ಬಲಿ

Update: 2020-06-29 16:06 GMT
ಸಾಂದರ್ಭಿಕ ಚಿತ್ರ

ಬೆಂಗಳೂರು, ಜೂ.29: ಕರ್ನಾಟಕದಲ್ಲಿ ಕೊರೋನ ಸೋಂಕಿತರ ಸಂಖ್ಯೆಯಲ್ಲಿ ವ್ಯಾಪಕ ಹೆಚ್ಚಳವಾಗುತ್ತಿದೆ. ಸೋಂಕಿತರು ಸಾವನ್ನಪ್ಪುತ್ತಿರುವ ಪ್ರಕರಣದಲ್ಲೂ ಏರಿಕೆಯಾಗುತ್ತಿದೆ. ರವಿವಾರ ಸಂಜೆಯಿಂದ ಸೋಮವಾರ ಸಂಜೆವರೆಗೆ ಮತ್ತೆ 1,105 ಮಂದಿಗೆ ಕೊರೋನ ವೈರಸ್ ಸೋಂಕು ದೃಢಪಟ್ಟಿದ್ದು, ಈ ಮೂಲಕ ಸೋಂಕಿತರ ಒಟ್ಟು ಸಂಖ್ಯೆ 14,295 ಕ್ಕೆ ಏರಿಕೆಯಾಗಿದೆ. 

ಬಳ್ಳಾರಿ ಜಿಲ್ಲೆಯೊಂದರಲ್ಲೇ 12 ಮಂದಿ ಸಾವನ್ನಪ್ಪಿದ್ದು, ಒಟ್ಟಾರೆ ರಾಜ್ಯದಲ್ಲಿ 19 ಮಂದಿಗೆ ಸೋಂಕಿಗೆ ಬಲಿಯಾಗಿದ್ದಾರೆ. ಈ ಮೂಲಕ ಸಾವಿನ ಸಂಖ್ಯೆ 226ಕ್ಕೆ ಏರಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.

ಉಳಿದಂತೆ ಬೆಂಗಳೂರು ನಗರ ಜಿಲ್ಲೆಯಲ್ಲಿ ನಾಲ್ಕು, ಬಾಗಲಕೋಟೆ, ದಕ್ಷಿಣ ಕನ್ನಡ ಮತ್ತು ಹಾಸನ ಜಿಲ್ಲೆಯಲ್ಲಿ ತಲಾ ಒಂದು ಸಾವು ಸಂಭವಿಸಿದೆ.

ಸೋಂಕು ಖಚಿತಗೊಂಡ ಪ್ರಕರಣಗಳ ಪೈಕಿ ಬೆಂಗಳೂರು ನಗರ 738, ಬಳ್ಳಾರಿ 76, ದಕ್ಷಿಣ ಕನ್ನಡ 32, ಬೀದರ್ 28, ಉತ್ತರ ಕನ್ನಡ 24, ಕಲಬುರಗಿ 23, ಹಾಸನ 22, ವಿಜಯಪುರ 22, ತುಮಕೂರು 18, ಉಡುಪಿ 18, ಚಿಕ್ಕಮಗಳೂರು 17, ಧಾರವಾಡ 17, ಚಿಕ್ಕಬಳ್ಳಾಪುರ 15, ಯಾದಗಿರಿ 9,  ಮಂಡ್ಯ 8, ಮೈಸೂರು 6, ಶಿವಮೊಗ್ಗ 5, ರಾಯಚೂರು 4, ಬಾಗಲಕೋಟೆ 4, ಗದಗ 4, ಕೋಲಾರ 4, ಬೆಂಗಳೂರು ಗ್ರಾಮಾಂತರ 3, ದಾವಣಗೆರೆ 2,  ಚಿತ್ರದುರ್ಗ 2, ರಾಮನಗರ 2 ಹಾಗೂ ಹಾವೇರಿ ಮತ್ತು ಕೊಡಗು ಜಿಲ್ಲೆಯಲ್ಲಿ ತಲಾ 1 ಪ್ರಕರಣ ಪಾಸಿಟಿವ್ ಬಂದಿದೆ.

ಒಟ್ಟಾರೆ ರಾಜ್ಯದಲ್ಲಿ 14,295 ಕೊರೋನ ಸೋಂಕಿತರ ಪೈಕಿ 7,683 ಮಂದಿ ಸಂಪೂರ್ಣ ಗುಣಮುಖರಾಗಿದ್ದಾರೆ. ಇದರಲ್ಲಿ ಇಂದು ಒಂದೇ ದಿನ 176 ಮಂದಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಉಳಿದಂತೆ ಇದುವರೆಗೆ 226 ಮಂದಿ ಸೋಂಕಿನಿಂದ ಸಾವನ್ನಪ್ಪಿದ್ದು, 6,382 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News