ವಕೀಲರಿಗೆ ಸಾಲ ನೀಡಲು ಆರ್ ಬಿಐ, ಕೇಂದ್ರ ಸರಕಾರಕ್ಕೆ ನಿರ್ದೇಶಿಸಲು ನಿರಾಕರಿಸಿದ ಹೈಕೋರ್ಟ್
Update: 2020-06-29 17:22 GMT
ಬೆಂಗಳೂರು, ಜೂ.29: ಲಾಕ್ಡೌನ್ ಜಾರಿಯಾದ ಹಿನ್ನೆಲೆಯಲ್ಲಿ ಕೆಲಸವಿಲ್ಲದೆ ಆರ್ಥಿಕ ಸಂಕಷ್ಟಕ್ಕೆ ಸಿಲುಕಿರುವ ವಕೀಲರಿಗೆ ಸಾಲ ಸೌಲಭ್ಯ ನೀಡಲು ಭಾರತೀಯ ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ ಹಾಗೂ ಕೇಂದ್ರ ಸರಕಾರಕ್ಕೆ ನಿರ್ದೇಶಿಸಲು ಹೈಕೋರ್ಟ್ ನಿರಾಕರಿಸಿದೆ.
ಆದರೆ, ವಕೀಲರು ಅಥವಾ ವಕೀಲರ ಸಂಘಗಳು ಸಾಲಕ್ಕಾಗಿ ಖುದ್ದಾಗಿ ಮನವಿ ಪತ್ರ ಸಲ್ಲಿಸಬಹುದು. ಅದನ್ನು ರಿಸರ್ವ್ ಬ್ಯಾಂಕ್ ಹಾಗೂ ಕೇಂದ್ರ ಸರಕಾರ ಪರಿಗಣಿಸಬಹುದು. ಅದೇ ರೀತಿಯಾಗಿ ಈಗಾಗಲೇ ಅರ್ಜಿದಾರರು ಕೇಂದ್ರ ಸರಕಾರಕ್ಕೆ ಹಾಗೂ ಆರ್ಬಿಐಗೆ ಸಲ್ಲಿಸಿರುವ ಮನವಿಯನ್ನು ಕಾನೂನು ರೀತಿ ಪರಿಗಣಿಸಲು ಈ ಆದೇಶ ಅಡ್ಡಿಯಾಗುವುದಿಲ್ಲ ಎಂದು ಅರ್ಜಿದಾರರ ಪರ ವಕೀಲರಿಗೆ ತಿಳಿಸಿ ನ್ಯಾಯಪೀಠವು ಅರ್ಜಿಯನ್ನು ಇತ್ಯರ್ಥಪಡಿಸಿದೆ.